ಬಾನಂಗಳದ ಬತ್ತಳಿಕೆಯಲ್ಲಿ

Author : ಟಿ. ಆರ್. ಅನಂತರಾಮು

Pages 110

₹ 70.00




Year of Publication: 2011
Published by: ವಸಂತ ಪ್ರಕಾಶನ
Address: ನಂ.360, 10ನೇ ಬಿ ಮುಖ್ಯರಸ್ತೆ, 3ನೇ ಬ್ಲಾಕ್ ಜಯನಗರ, ಬೆಂಗಳೂರು- 560011
Phone: 08022443996

Synopsys

ಆಕಾಶ ಎಂದರೆ ಎಲ್ಲರಿಗೂ ಬೆರಗು, ಕೊನೆ ಇರದ ಕುತೂಹಲ, ಮನೋಹರ ಲೋಕ. ಇದರ ಹಿಂದೆ ಹಲವಾರು ದುರಂತಗಳು. ಬಾನಂಗಳದಿಂದ ಭುಮಿಯತ್ತ ಮುನ್ನುಗ್ಗಿ ಬರುವ ಉಲ್ಕೆಗಳು ಸೃಷ್ಟಿಸಿರುವ ಅನಾಹುತ, ಧರೆಯ ಮೇಲಿನ ಜೀವ ಸಂಕುಲವನ್ನೇ ಹೊಸಕಿ ಹಾಕಲು ಹಾತೊರೆಯುವ ಕ್ಷುದ್ರ ಗ್ರಹಗಳ ಕುರಿತು ವೈಜ್ಞಾನಿಕವಾಗಿ ಲೇಖಕರು ತಿಳಿಸಿದ್ದಾರೆ.

About the Author

ಟಿ. ಆರ್. ಅನಂತರಾಮು
(03 August 1949)

ಭೂ ವಿಜ್ಞಾನಿ, ಸಂಶೋಧಕ, ಅಂಕಣಕಾರ, ವಿಜ್ಞಾನ ಲೇಖಕ ಟಿ.ಆರ್. ಅನಂತರಾಮು ಅವರು ಜನಿಸಿದ್ದು 1949 ಆಗಸ್ಟ್ 3ರಂದು ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ತಾಳಗುಂದದಲ್ಲಿ.ತಾಳಗುಂದ ರಾಮಣ್ಣ ಅನಂತರಾಮು ಅವರ ಪೂರ್ಣ ಹೆಸರು. ಸಿರಾದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಮಾಧ್ಯಮಿಕ ಶಿಕ್ಷಣ ಪೂರ್ಣಗೊಳಿಸಿದ ಅವರು ಸಿರಾದ ಮುನಿಸಿಪಲ್ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದ್ದಾರೆ. ಆನಂತರ ತುಮಕೂರಿನ ಸರ್ಕಾರಿ ಕಾಲೇಜಿನಲ್ಲಿ ಪದವಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎನ್ಸಿ(ಜಿಯಾಲಜಿ) ಪದವಿ ಪಡೆದಿದ್ದಾರೆ.  ಭೂ ವಿಜ್ಞಾನ ವಿಷಯದಲ್ಲಿ ಪದವಿ ಪಡೆದ ನಂತನ ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ರಾಜ್ಯದ ನಾನಾ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದ್ದಾರೆ.  ...

READ MORE

Related Books