ಬಡತನದ ಬಾಳು

Author : ಬೆಟಗೇರಿ ಕೃಷ್ಣಶರ್ಮ (ಆನಂದಕಂದ)

Pages 111

₹ 8.00




Year of Publication: 1932
Published by: ಜಯಕರ್ನಾಟಕ ಗ್ರಂಥಮಾಲೆ
Address: ಧಾರವಾಡ

Synopsys

ಆನಂದಕಂದ ಕಾವ್ಯನಾಮದಿಂದ ಬರೆಯುತ್ತಿದ್ದ ಬೆಟಗೇರಿ ಕೃಷ್ಣಶರ್ಮ ಅವರ ಕಥಾ ಸಂಕಲನ ಇದು. ಮೂರು ಕಥೆಗಳು ಈ ಸಂಗ್ರಹದಲ್ಲಿವೆ. ಆನಂದಕಂದರು ತಮ್ಮ ಕಥೆಗಳಲ್ಲಿ ಬಡತನದ ರೋಗವನ್ನು ಬಯಲಿಗೆಳೆದು ಕಟ್ಟಿದ್ದಾರೆ ಎಂದು ಕವಿ ಬೇಂದ್ರೆಯವರು ಈ ಪುಸ್ತಕಕ್ಕೆ ಬರೆದ ಮುನ್ನುಡಿಯಲ್ಲಿ ಹೇಳಿದ್ದಾರೆ.

About the Author

ಬೆಟಗೇರಿ ಕೃಷ್ಣಶರ್ಮ (ಆನಂದಕಂದ)
(16 April 1900 - 30 October 1982)

ಬೆಟಗೇರಿ ಕೃಷ್ಣಶರ್ಮರ ಕಾವ್ಯನಾಮ-ಆನಂದಕಂದ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ 1900ರ ಏಪ್ರಿಲ್ 16ರಂದು ಜನಿಸಿದರು. ತಂದೆ ಶ್ರೀನಿವಾಸರಾಯರು; ತಾಯಿ ರಾಧಾಬಾಯಿ..  ಕೃಷ್ಣಶರ್ಮರು 12ನೇ  ವರ್ಷದವನಿರುವಾಗ ತಂದೆ, 15ನೇ ವರ್ಷಕ್ಕೆ ಅಣ್ಣ ಹಣಮಂತರಾಯ, 18ನೇ ವರ್ಷಕ್ಕೆ ತಾಯಿ ತೀರಿಕೊಂಡರು. ಸ್ವತಃ ಕೃಷ್ಣಶರ್ಮರೆ ತಮ್ಮ 14ನೇ ವಯಸ್ಸಿನಲ್ಲಿ  ವಿಷಮಶೀತ ಜ್ವರ ಹಾಗೂ 15ನೇ ವಯಸ್ಸಿಗೆ ಪ್ಲೇಗ್ ನಿಂದ ಬಳಲಿ ಜೀವನುದ್ದಕ್ಕೂ ದುರ್ಬಲ ಕೈ-ಕಾಲುಗಳನ್ನು ಹೊಂದಬೇಕಾಯಿತು. 1928ರಲ್ಲಿ ತುಳಸೀಬಾಯಿಯೊಂದಿಗೆ ಮದುವೆ. ಕೃಷ್ಣಶರ್ಮರು 56 ವಯಸ್ಸಿನವರಿದ್ದಾಗ ಮಗಳು  ಹಾಗೂ  ಮರು ವರ್ಷವೇ ಪತ್ನಿ ತೀರಿ ಹೋದರು. 5ನೇ ತರಗತಿವರೆಗೆ ಬೆಟಗೇರಿಯಲ್ಲಿ ಪ್ರಾಥಮಿಕ ಶಿಕ್ಷಣ ನಂತರ, ಕಂಪಿಸುವ ಕೈ-ಕಾಲುಗಳೊಂದಿಗೆ 5 ...

READ MORE

Related Books