ಬದುಕೆಂಬ ಬವಣೆಯಲ್ಲಿ

Author : ಸಂಗಮೇಶ ತಮ್ಮನಗೌಡ್ರ

Pages 72

₹ 50.00




Year of Publication: 2008
Published by: ನೀಲಾ ಪ್ರಕಾಶನ
Address: ಗುಜಮಾಗಡಿ, ತಾ: ರೋಣ, ಜಿ: ಗದಗ
Phone: 9449074397

Synopsys

ಲೇಖಕ ಸಂಗಮೇಶ ತಮ್ಮಗೌಡ್ರ ಅವರು ಬರೆದ ಕಾದಂಬರಿ-ಬದುಕೆಂಬ ಬವಣೆಯಲ್ಲಿ. ಮಾತೃ ಋಣದ ಪ್ರಾಮುಖ್ಯತೆಯನ್ನು ತಿಳಿಸುವ ಕಥಾ ವಸ್ತು ವಿರುವ ಈ ಕಾದಂಬರಿಯು ತಮ್ಮದೇ ಜೀವನ ವೃತ್ತಾಂತವನ್ನು ಹೊಂದಿರುವುದಾಗಿ ಲೇಖಕರು ಹೇಳಿದ್ದಾರೆ. ಆದರೂ, ಸರ್ವರ ಬದುಕಿನಲ್ಲಿ ತಂದೆ-ತಾಯಿ ವಹಿಸುವ ಪಾತ್ರದ ಪ್ರಾಮುಖ್ಯತೆಯನ್ನು ಮನವರಿಕೆ ಮಾಡಿಕೊಡುವ ನೀತಿಬೋಧಕ ವಸ್ತುವನ್ನು ಇಲ್ಲಿ ಕಾಣಬಹುದು.

About the Author

ಸಂಗಮೇಶ ತಮ್ಮನಗೌಡ್ರ
(15 January 1970)

ಸಂಗಮೇಶ ತಮ್ಮನಗೌಡ್ರ (ಎಸ್.ವಿ. ತಮ್ಮನಗೌಡ್ರ) ಮೂಲತಃ ಗದಗ ಜಿಲ್ಲೆಯ ಗುಜಮಾಗಡಿ ಗ್ರಾಮದವರು. (ಜನನ: 15-01-1970) ಸದ್ಯ, ರೋಣ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ವಿ.ವಿ.ಯಿಂದ ಎಂ.ಎ, ಮಧುರೈ ಕಾಮರಾಜ ವಿವಿಯಿಂದ ಎಂ.ಫಿಲ್ ಹಾಗೂ ಮುಂಬೈ ವಿ.ವಿ.ಯಿಂದ ಪಿಎಚ್ ಡಿ (ವಿಷಯ: ಕನ್ನಡದಲ್ಲಿ ಏಕಾಂಕಗಳು: ಒಂದು ಅಧ್ಯಯನ-1975-95) ಪದವಿ ಪಡೆದರು. ದ.ರಾ. ಬೇಂದ್ರೆ ವೇದಿಕೆ ಸ್ಥಾಪಿಸಿ (2000) ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕೃತಿಗಳು: ಹಂಸ, ಸ್ಫೂರ್ತಿ-ಕವನ ಸಂಕಲನಗಳು, ಮತ್ತೆ ಹುಟ್ಟಿತು ಕವನ-ಭಾವಗೀತೆಗಳ ಸಂಕಲನ, ಪಶ್ಚಾತ್ತಾಪ, ಕರುಳಿನ ಬೆಲೆ, ಖಳನಾಯಕನ ...

READ MORE

Related Books