ಬಲ್ಲವರು ಬಲ್ಲಂತೆ ಭೈರಪ್ಪ

Author : ಎಂ. ಎಸ್‍ ವಿಜಯಾಹರನ್

Pages 320

₹ 320.00




Year of Publication: 2021
Published by: ಸಾಹಿತ್ಯ ಭಂಡಾರ
Address: # 8, ಜೆಎಂ ಲಿಂಕ್ ಬಳೇಪೇಟೆ, ಚಿಕ್ಕಪೇಟೆ, ಬೆಂಗಳೂರು-560053
Phone:  080 2287 7618

Synopsys

ಎಂ.ಎಸ್. ವಿಜಯಾ ಹರನ್ ಅವರು ಸಂಪಾದಿಸಿರುವ ಕೃತಿ ‘ಬಲ್ಲವರು ಬಲ್ಲಂತೆ ಭೈರಪ್ಪ’. ಈ ಹೊತ್ತಿಗೆಯು ಭೈರಪ್ಪನವರ ತೊಂಬತ್ತು ವಸಂತಗಳನ್ನು ಪೂರೈಸಿದ ಸವಿನೆನಪಿಗಾಗಿ ಅವರಿಗೆ ಸಾಹಿತ್ಯಲೋಕ ಅದರದಿಂದ ಅರ್ಪಿಸಿದ ನಲ್ಮೆಯ ನುಡಿಗಾಣಿಕೆ. ಭೈರಪ್ಪನವರನ್ನು ಬಹುಕಾಲದಿಂದ ಆಪ್ತವಾಗಿ ಬಲ್ಲ ಅನೇಕರ ಅನುಭವಗಳೂ ಆತ್ಮೀಯತೆಗಳೂ ಆಸಕ್ತರಿಗೆ ಮುಟ್ಟಿಲ್ಲವೆಂಬ ಕೊರತೆಯನ್ನು ಕಳೆಯುವ ನಿಟ್ಟನಲ್ಲಿ ಸದ್ಯದ ಗ್ರಂಥ 'ಬಲ್ಲವರು ಬಲ್ಲಂತೆ ಭೈರಪ್ಪ' ಮಹತ್ತ್ವದ್ದೆನಿಸಿದೆ. ಇಲ್ಲಿ ಭೈರಪ್ಪನವರನ್ನು ಹಲವು ಮಜಲುಗಳಲ್ಲಿ ನೋಡಿ, ಒಡನಾಡಿ, ಮಾತನಾಡಿ, ಸ್ನೇಹಾದರಗಳನ್ನು ತುಂಬಿಕೊಂಡ ಸಾಹಿತ್ಯಸಾಧಕರ, ಸಂವೇದನಶೀಲ ಸಹೃದಯರ ಅನಿಸಿಕೆ ಅಭಿಪ್ರಾಯಗಳು ಬೆಚ್ಚಗಿನ ಪ್ರೀತಿ-ವಿಶ್ವಾಸಗಳ ತೆಕ್ಕೆಯಲ್ಲಿ ರೂಪುಗೊಂಡಿವೆ. ಹಾಗೆಂದಮಾತ್ರಕ್ಕೆ ಇಲ್ಲಿರುವುದು ಬಲಯ ಅಂಧ ಆರಾಧನೆಯಲ್ಲ, ಮುಗ್ಧವಾದ ಮೆಚ್ಚುಗೆಯಲ್ಲಿ, ಇದು ಅಕ್ಕರೆ ಬಾಧ್ಯತೆಯುಳ್ಳ ಎಚ್ಚರದ ಅಕ್ಷರಾಭಿವ್ಯಕ್ತಿಯೂ ಹೌದು. ಈ ವರೆಗೆ ಅಷ್ಟಾಗಿ ತಿಳಿದಿರದ - ಆದರೆ ತಿಳಿಯಲು ಬಯಸುವ - ಭೈರಪ್ಪನವರ ಆರ್ದ್ರವೂ ಆತ್ಮೀಯವೂ ಆದ ಸಾಹಿತ್ಯೇತರ ಮುಖಗಳನ್ನು ಪರಿಚಯ ಮಾಡಿಕೊಳ್ಳುವ ಸುಸಂದರ್ಭ ಒದಗಿದೆ. ಹೀಗಾಗಿ ಸದ್ಯದ ಕೃತಿಗೆ ತನ್ನದೇ ಆದ ವಿಶಿಷ್ಟ ಸ್ಥಾನ ದಲ್ಲಿದೆ. ಜೊತೆಗೆ ಅಕ್ಷರಲೋಕದಲ್ಲಿ ಮಾತ್ರವಲ್ಲದೆ ಆತ್ಮೀಯತೆಯ ವಿಶ್ವದಲ್ಲಿ ಕೂಡ ಭೈರಪ್ಪನವರು ಅಸಾಮಾನ್ಯರೆಂಬ ಸುಂದರವಾದ ಸತ್ಯ ಕೂಡ ಇಲ್ಲಿ ಅನಾವರಣಗೊಂಡಿದೆ.

 

 

 

About the Author

ಎಂ. ಎಸ್‍ ವಿಜಯಾಹರನ್

ಮೂಲತಃ ಕೋಲಾರ ಜಿಲ್ಲೆಯವರಾದ ಬರಹಗಾರ್ತಿ ಎಂ.ಎಸ್. ವಿಜಯಾ ಹರನ್‌ ಅವರು ಸುಮಾರು ನಾಲ್ಕು ದಶಕಕ್ಕೂ ಹೆಚ್ಚು ಕಾಳ ಆಕಾಶವಾಣಿಯಲ್ಲಿ ಸೇವೆಸಲ್ಲಿಸಿ ನಿವೃತ್ತರಾದವರು. ಮೈಸೂರು, ಮಂಗಳೂರು, ಭದ್ರಾವತಿ, ಗುಲ್ಬರ್ಗ ಹಾಗೂ ಹಾಸನ ಆಕಾಶವಾಣಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಬಾನುಲಿ ಬೆಳಗು ಕಾರ್ಯಕ್ರಮದ ಮೂಲಕ ಸಮಗ್ರ ಗ್ರಾಮೀಣ ಅಭಿವೃದ್ಧಿಗಾಗಿ ಕಾರ್ಯಕ್ರಮಗಳ ಪ್ರಸಾರ, ತರಬೇತಿಗಳನ್ನು ನಡೆಸಿದ್ದಾರೆ.  ಆನಂದರ ಬದುಕು ಬರಹ - ಒಂದು ಅಧ್ಯಯನ, ಆಲೋಕ, ಅಜ್ಜಂಪುರ ಸೀತಾರಾಂ, ಸಂಕೇತಿ ಬೇಸಾಯದ ಬದುಕು, ಗಾದೆ ಗದ್ದುಗೆ, ಎಸ್.ಎಲ್. ಭೈರಪ್ಪನವರ ಕಾದಂಬರಿಯಲ್ಲಿ ಗಾದೆಗಳು ಮುಂತಾದ ಪ್ರಮುಖ ಕೃತಿಗಳನ್ನು ರಚಿಸಿದ್ದಾರೆ.  ...

READ MORE

Related Books