ಬಾಳು ಸಾವು ಒಡ್ಡುತ್ತಿರುವ ಆಮಿಷ

Author : ಲಕ್ಷ್ಮೀಶ ತೋಳ್ಪಾಡಿ

Pages 84

₹ 75.00




Year of Publication: 2021
Published by: ಅಭಿನವ ಪ್ರಕಾಶನ
Address: 17/18-2, 1ನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
Phone: 9448804905

Synopsys

‘ಬಾಳು ಸಾವು ಒಡ್ಡುತ್ತಿರುವ ಆಮಿಷ’ ಲಕ್ಷ್ಮೀಶ ತೋಳ್ಪಾಡಿ ಅವರ ಕೃತಿ. ಇದನ್ನು ಉಪನಿಷತ್ತಿಗೊಂದು ಮರುಪ್ರವೇಶ ಎಂದು ತಿಳಿಸಿದ್ದಾರೆ. ಬದುಕೆನ್ನುವುದು `ಕ್ಷಣಿಕ' ಎನ್ನುವುದೇ ಸಾವಿನ ಕಾಣ್ಕೆಯಾಗಿರುವುದರಿಂದ, ವಿಚಿತ್ರವೆನ್ನುವಂತೆ, ಕ್ಷಣಿಕತೆಯೇ ವಿರಕ್ತಿಗಿಂತ ಹೆಚ್ಚಾಗಿ ಬದುಕಿನಲ್ಲಿ ರುಚಿಯನ್ನು ಉದ್ದೀಪಿಸುವ ಭಾವವೂ ಆಗಿರುವುದರಿಂದ, ಅಂದರೆ- ಮುಗಿಯುವ ಮುನ್ನ ಆದಷ್ಟು ಸವಿಯೋಣ ಎಂದು ತೀವ್ರವಾಗಿ ಅನ್ನಿಸುವುದರಿಂದ- ಬದುಕನ್ನು ಸವಿಯುವುದಿಲ್ಲವೇನು? ಎಂದು ಸಾವೇ ಕೇಳುತ್ತಿರುವಂತೆ ಉಪನಿಷತ್ತು ಚಿತ್ರಿಸುತ್ತದೆ. ಈ ಮೂಲದಿಂದ ಈ ಕೃತಿ ಉಪನಿಷತ್ತಿಗೆ ನಿರಾಳ ಪ್ರವೇಶವನ್ನು ಕಲ್ಪಿಸುತ್ತದೆ ಎನ್ನಬಹುದು.

About the Author

ಲಕ್ಷ್ಮೀಶ ತೋಳ್ಪಾಡಿ

ಲಕ್ಷ್ಮೀಶ ತೋಳ್ವಾಡಿ ಕೃಷಿಕ, ಚಿಂತಕ ಮತ್ತು ವಿದ್ವಾಂಸರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಶಾಂತಿಗೋಡು ಗ್ರಾಮದವರು. ಇವರದು ತೋಳ್ಳಾಡಿತ್ತಾಯ ವೈದಿಕ ಮನೆತನ, ಉತ್ತುಬಿತ್ತು ಗೇಯುವ ಕಾಯಕ. ಆಡುಭಾಷೆ ತುಳು. ವೈದಿಕ ಮತ್ತು ವೈಚಾರಿಕ ನಿಲುವುಗಳನ್ನು ಪರಸ್ಪರ ಮುಖಾಮುಖಿಯಾಗಿಸಿದರು. ತಾರುಣ್ಯದಲ್ಲಿ ಕೆಲ ಕಾಲ ಬೆಂಗಳೂರಿನಲ್ಲಿದ್ದರು. ವೈ.ಎನ್.ಕೆ, ಗೋಪಾಲಕೃಷ್ಣ ಅಡಿಗ, ಲಂಕೇಶ ಪತ್ರಿಕೆ, ಕಿ.ರಂ. ನಾಗರಾಜ  ಅವರ ಒಡನಾಟ ಸಿಕ್ಕಿತ್ತು. ಭಕ್ತಿ-ವಿಭಕ್ತಿಗಳ ನಡುವಿನ ಆಧ್ಯಾತ್ಮಿಕ ವ್ಯಾಕರಣದ ಹುಡುಕಾಟ ತೀವ್ರಗೊಂಡು ಶಿವಮೊಗ್ಗಕ್ಕೆ ತೆರಳಿದಾಗ ಅಲ್ಲಿ ಸತ್ಯಕಾಮರ ಒಡನಾಟ ದಕ್ಕಿತು. ಪುತ್ತೂರಿನ ಅಜ್ಜನ ಸಾಧನೆಯ ಗವಿಯೊಳಗೆ ಕಂಡ ಬೆಳಕು ಕೆಲಕಾಲ ಇವರನ್ನು ಕೈಹಿಡಿದು ನಡೆಸಿತು. ಬುದ್ಧ, ಗಾಂಧಿಯವರ ಮಧ್ಯಮ ...

READ MORE

Related Books