ಬಂಕಿಮಚಂದ್ರರ ಶ್ರೇಷ್ಠ ಕತೆಗಳು

Author : ಎಂ.ವಿ ನಾಗರಾಜರಾವ್

Pages 240

₹ 153.00




Year of Publication: 2016
Published by: ವಸಂತ ಪ್ರಕಾಶನ
Address: # 360, 10ನೇ ಬಿ;ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ಕ್ಲಬ್, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011,
Phone: 0802244 3996

Synopsys

ಬಂಕಿಮಚಂದ್ರರ ಶ್ರೇಷ್ಠ ಕತೆಗಳು-ಲೇಖಕ ಎಂ.ವಿ. ನಾಗರಾಜರಾವ್ ಅವರ ಕೃತಿ. "ವಂದೇ ಮಾತರಂ" ಗೀತೆ ಬರೆಯುವ ಮೂಲಕ ದೇಶಾದ್ಯಂತ ಖ್ಯಾತರಾದ ಬಂಕಿಮಚಂದ್ರರು ಬಂಗಾಳದ ಪ್ರಸಿದ್ಧ ಕಾದಂಬರಿಕಾರರು. ಈ ಗೀತೆ ಅವರ "ಆನಂದ ಮಠ" ಕಾದಂಬರಿಯಲ್ಲಿ ಬರೆಯಲಾಗಿದೆ. ಕಾದಂಬರಿಗಳು, ಕವಿತೆ, ಲೇಖನ, ಪ್ರಬಂಧ, ಭಗವದ್ಗೀತೆಯ ಕುರಿತ ಭಾಷ್ಯ- ಹೀಗೆ ಬಂಕಿಮರ ಸಾಹಿತ್ಯ ವೈವಿಧ್ಯಮಯ. ಬಂಕಿಚಂದ್ರರ 8 ಕಾದಂಬರಿಗಳನ್ನು ಆಯ್ದುಕೊಂಡಿರುವ ಲೇಖಕರು ಅವುಗಳಿಗೆ ಸಂಕ್ಷಿಪ್ತವಾಗಿ ಕಥಾ ರೂಪು ನೀಡಿದ್ದೇ ಈ ಕೃತಿಯ ವೈಶಿಷ್ಟ್ಯ.

About the Author

ಎಂ.ವಿ ನಾಗರಾಜರಾವ್

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಎಂ.ವಿ. ನಾಗರಾಜ ರಾವ್, ಸರ್ಕಾರಿ ಜೂನಿಯರ್‍ ಕಾಲೇಜಿನ ಉಪಾನ್ಯಾಸಕರು ನಂತರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ಎಂ.ಎ. ಹಾಗೂ ಬಿ.ಇಡಿ. ಸಾಹಿತ್ಯ ರತ್ನ ಪೂರೈಸಿದ್ದಾರೆ. ಜೇಮ್ಸ್ ಹ್ಯಾಡ್ಲಿ ಚೇಸ್ ಅವರ 20 ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ ಹೆಗ್ಗಳಿಕೆ ಇವರದ್ದು. ಹಾಸ್ಯ-ವಿಡಂಬನೆ-ವೈಚಾರಿಕತೆ ಸೇರಿದಂತೆ ಸುಮಾರು 300ಕ್ಕೂ ಅಧಿಕ ಲೇಕನಗಳನ್ನು ಬರೆದಿದ್ದಾರೆ. ಇವರ ‘ಕಂಪನ’ ಕಾದಂಬರಿಯು ಚಲನಚಿತ್ರವಾಗಿದೆ. ಮಕ್ಕಳ ಸಾಹಿತ್ಯಕ್ಕೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. 1985ರಲ್ಲಿ ಶೃಂಗಾರ ಪ್ರಕಾಶನ ಸಂಸ್ಥೆ ಸ್ಥಾಪಿಸಿ, ಸುಮಾರು  242 ಪುಸ್ತಕಗಳನ್ನು ಪ್ರಕಟಿಸಿದ್ದು, ಕರ್ನಾಟಕ ಸರ್ಕಾರದಿಂದ ‘ಪುಸ್ತಕ ಸೊಗಸು’ ಪ್ರಶಸ್ತಿ ಪಡೆದಿದ್ದಾರೆ.  ಅನುವಾದಿತ ಕೃತಿಗಳು : ಜೇಮ್ಸ್‌ ಹ್ಯಾಡ್ಲಿ ...

READ MORE

Related Books