ಬರೆಯುವುದು ಹೇಗೆ

Author : ಯತಿರಾಜ್‍ ವೀರಾಂಬುಧಿ

Pages 259

₹ 299.00




Year of Publication: 2023
Published by: ದ ರೈಟ್ ಆರ್ಡರ್
Address: ಬೆಂಗಳೂರು

Synopsys

‘ಬರೆಯುವುದು ಹೇಗೆ’ ಕೃತಿಯು ಯತಿರಾಜ್‍ ವೀರಾಂಬುಧಿ ಅವರ ಲೇಖನಸಂಕಲನವಾಗಿದೆ. ಈ ಕೃತಿಯು ಬರವಣಿಗೆಯ ಕುರಿತಾಗಿದೆ. ಬರವಣಿಗೆಯ ಮಾರ್ಗದರ್ಶನದ ಆವಶ್ಯಕತೆಯನ್ನು ಇದು ಪೂರೈಸುತ್ತದೆ. ಸ್ಪಷ್ಟವಾಗಿ ಸುಲಭವಾಗಿ ಅರ್ಥವಾಗುವ ಸರಳ ಭಾಷೆಯಲ್ಲಿ ಬರೆಯುವುದು ಹೇಗೆಂದು ಈ ಪುಸ್ತಕ ತಿಳಿಸಿಕೊಡುತ್ತದೆ. ಒಟ್ಟಾರೆಯಾಗಿ ಸಾಹಿತ್ಯ ಲೋಕದ ಕುರಿತ ಹಲವಾರು ವಿಚಾರಗಳನ್ನು ಈ ಕೃತಿಯು ಮಾತನಾಡುತ್ತದೆ.

About the Author

ಯತಿರಾಜ್‍ ವೀರಾಂಬುಧಿ
(11 August 1957)

ಕಥೆಗಾರ,ಲೇಖಕ, ಅನುವಾದಕ, ಕಾದಂಬರಿಗಾರರಾದ ಯತಿರಾಜ್ ವೀರಾಂಬುಧಿ 11-08-1957ರಂದು ಮೈಸೂರಿನಲ್ಲಿ ಜನಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ ಅವರು ಮೈಸೂರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ನಲ್ಲಿ ಬಿ.ಇ (ಎಲೆಕ್ಟ್ರಿಕಲ್ ಪವರ್) ಮುಗಿಸಿದರು. ಬೆಂಗಳೂರು ಮತ್ತು ಸಲ್ತನತ್ ಆಫ್ ಒಮಾನ್‌ನಲ್ಲಿ ಕಾರ್ಯ ನಿರ್ವಹಿಸಿ 2013ರಲ್ಲಿ ನಿವೃತ್ತಿ ಪಡೆದಿದ್ದಾರೆ. ಯತಿರಾಜ್ ವೀರಾಂಬುಧಿಯವರ ಪ್ರಕಟಿತ ಕೃತಿಗಳು-  ಆಪತ್ತಿಗೆ ಆಹ್ವಾನ, ಪರಿಶೋಧ, ಗಾಥೆ, ಮರದಡಿ ಮಳೆ, ಪಂಚಾನನ, ಜೀವನ್ಮುಖಿ, ಸಾಬೀತು, ಕುರುಡು ತಿರುವು, ಅವಿನಾಭಾವ, ಹಸ್ತಕ್ಷೇಪ, ಹಾಸುಹೊಕ್ಕು, ಕಪ್ಪು ನದಿ, ಉದ್ಯೋಗ ಪರ್ವ, ಕರೆದರೆ ಬಾರೆ..!, ಒಂದೊಂದಾಗಿ ಜಾರಿದರೆ, ರಣವೀಳ್ಯ, ಚಿರಸ್ಮಿತ, ಸುಖಿಯಾಗಿರು ...

READ MORE

Related Books