ಬಾರೋ ಬಾರೋ ಮಳೆರಾಯ

Author : ಎಚ್. ಎಸ್. ವೆಂಕಟೇಶಮೂರ್ತಿ

Pages 192

₹ 190.00




Published by: ಅಂಕಿತ ಪುಸ್ತಕ
Address: #53, ಶ್ಯಾಮ್ ಸಿಂಗ್ ಕಾಂಪ್ಲೆಕ್ಸ್, ಗಾಂಧಿ ಬಜಾರ್ ಮೈನ್ ರೋಡ್,ಬಸವನಗುಡಿ ಬೆಂಗಳೂರು ಕರ್ನಾಟಕ-560004
Phone: 08026617100

Synopsys

‘ಬಾರೋ ಬಾರೋ ಮಳೆರಾಯ’ ಕೃತಿಯು ಎಚ್.ಎಸ್. ವೆಂಕಟೇಶಮೂರ್ತಿ ಅವರ ಮಕ್ಕಳ ಪದ್ಯಗಳ ಸಂಕಲನವಾಗಿದೆ. ಕೃತಿಗೆ ಬೆನ್ನುಡಿ ಬರೆದಿರುವ ಕವಿ  ಜಿ.ಎಸ್.ಶಿವರುದ್ರಪ್ಪ, ‘ಕನ್ನಡ ನವೋದಯ ಸಾಹಿತ್ಯ ಸಂದರ್ಭದ ನಂತರ, ಸೃಜನಶೀಲರಾದ ಕನ್ನಡ ಕವಿಗಳ ನಿರ್ಲಕ್ಷ್ಯಕ್ಕೆ ಗುರಿಯಾದ ಪ್ರಕಾರವೆಂದರೆ ಮಕ್ಕಳ ಸಾಹಿತ್ಯ, ಪಂಜೆ, ಹೊಯಿಸಳ, ಕಾರಂತ, ಎಲ್. ಗುಂಡಪ್ಪ, ಕುವೆಂಪು, ರಾಜರತ್ನಂ ಇಂಥವರಿಂದ ರಚಿತವಾದ, ಲವಲವಿಕೆಯ ಮಕ್ಕಳ ಕವಿತೆಗಳ ನಂತರ, ಮುಂದಿನದು ಒಂದು ಬಗೆಯ ಬೀಳುಗಾಲವೆಂದೇ ಹೇಳಬೇಕು. ಕಥನದ ವಿವಿಧ ಪ್ರಕಾರಗಳಲ್ಲಿ ತಮ್ಮನ್ನು ಪಳಗಿಸಿಕೊಂಡ ವೆಂಕಟೇಶಮೂರ್ತಿಯವರ ಪ್ರವೇಶದಿಂದಾಗಿ ಮಕ್ಕಳ ಕವಿತೆಗೊಂದು ವಸಂತ ಸ್ಪರ್ಶವೇ ದೊರಕಿತು ಎಂದರೆ ಅದೇನೂ ಉತ್ಪ್ರೇಕ್ಷೆಯ ಮಾತಲ್ಲ’ ಎಂದು ಪ್ರಶಂಸಿಸಿದ್ದಾರೆ. 

About the Author

ಎಚ್. ಎಸ್. ವೆಂಕಟೇಶಮೂರ್ತಿ
(23 June 1944)

ವೆಂಕಟೇಶ ಮೂರ್ತಿ ಅವರು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಹಳ್ಳಿಯಲ್ಲಿ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದರು. ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. 2000 ರಲ್ಲಿ ನಿವೃತ್ತರಾದ ಅವರು ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಪ್ರಾರಂಭದಲ್ಲಿ ಯಕ್ಷಗಾನ, ಬಯಲಾಟದಂಥ ರಂಗಪ್ರದರ್ಶನಗಳು ಇವರ ಮೇಲೆ ಗಾಢ ಪ್ರಭಾವ ಬೀರಿದವು. ಬಾಲ್ಯದಲ್ಲೇ ಕುಮಾರವ್ಯಾಸ, ಪುರಂದರ, ಲಕ್ಷ್ಮೀಶ ಮೊದಲಾದವರ ಕೃತಿಗಳ ನಿಕಟ ಸಂಪರ್ಕ ದೊರೆಯಿತು. ಮುಂದೆ ಕನ್ನಡ, ಸಂಸ್ಕೃತ, ಇಂಗ್ಲಿಷ್ ಸಾಹಿತ್ಯ ಪರಂಪರೆಯೊಂದಿಗೆ ನಡೆಸಲಾದ ...

READ MORE

Related Books