ಬಸವಣ್ಣ: ಪುನರ್ಲೇಖ

Author : ಕರೀಗೌಡ ಬೀಚನಹಳ್ಳಿ

Pages 220

₹ 180.00




Year of Publication: 2015
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ
Phone: 08022372388

Synopsys

ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಚರಿತ್ರೆಯಲ್ಲಿ 12ನೇ ಶತಮಾನದ ವಚನಯುಗ ಅನನ್ಯ. ಮೊದಲ ಬಾರಿಗೆ ಎಲ್ಲ ಸಮುದಾಯದ ವಚನಕಾರರು ಮತ್ತು ವಚನಕಾರ್ತಿಯರು ಈ ಸಾಮಾಜಿಕ, ಧಾರ್ಮಿಕ ಆಂದೋಲನದಲ್ಲಿ ರಚನಾತ್ಮಕವಾಗಿ ಪಾಲ್ಗೊಂಡವರು; ವ್ಯಕ್ತಿನಿಷ್ಠ ನೆಲೆಯಲ್ಲಿ ನಿಂತು ಸಾಮಾಜಿಕ ಪರಿವರ್ತನೆಯ ಬಗ್ಗೆ ಚಿಂತಿಸಿದವರು. ಇಂತಹ ವಿಶಿಷ್ಟ ಕಾರಣಗಳಿಂದಾಗಿ ವಚನಗಳು ಸಮಕಾಲೀನ ಕನ್ನಡದ ಲೇಖಕರನ್ನು ಇನ್ನೂ ಪ್ರಭಾವಿಸುತ್ತಿವೆ. ಇಂತಹ ಪ್ರಭಾವ ಪ್ರೇರಣೆಗಳ ಬೆಳಕಿನಲ್ಲಿ ಪ್ರಸ್ತುತ ಕನ್ನಡ ಸಮಾಜದ ಸಮಸ್ಯೆ ಮತ್ತು ಸವಾಲುಗಳನ್ನು ಅರ್ಥೈಸುವ ಪ್ರಯತ್ನವಾಗಿ ಕರೀಗೌಡ ಬೀಚನಹಳ್ಳಿ ಅವರು, ’ಬಸವಣ್ಣ: ಪುನರ್ಲೇಖ” ಕೃತಿ ರಚಿಸಿದ್ದಾರೆ.

About the Author

ಕರೀಗೌಡ ಬೀಚನಹಳ್ಳಿ
(10 September 1951)

ಕರೀಗೌಡ ಬೀಚನಹಳ್ಳಿ ಅವರು 1951 ಸೆಪ್ಟೆಂಬರ್‌ 10ರಂದು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬೀಚನಹಳ್ಳಿಯಲ್ಲಿ ಜನಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು, ವ್ಯಷ್ಟಿ-ಸಮಷ್ಟಿ ಪ್ರಬಂಧ ಮಂಡಿಸಿ  ಪಿಎಚ್‌ಡಿ ಪದವಿಯನ್ನು ಪಡೆದಿದ್ದಾರೆ. .ಬೆಂಗಳೂರು ವಿಶ್ವವಿದ್ಯಾಲಯದ ಪ್ರಸಾರಂಗದಲ್ಲಿ ಕಾರ್ಯ ನಿರ್ವಹಿಸಿದ ನಿವರು, ಹಂಪಿ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಪ್ರಸಾರಂಗದ ನಿರ್ದೇಶಕರಾಗಿ ನಂತರ ಕುಲಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.  ಕನ್ನಡ ಸಾಹಿತ್ಯದೆಡೆಗಿನ ಒಲವು ಕಾಲೇಜು ದಿನಗಳಿಂದಲೇ ಸಾಹಿತ್ಯ ಕೃಷಿಯಲ್ಲಿ ತೊಡಗುವಂತೆ ಮಾಡಿತ್ತು. ಇವರು ಬರೆದ ಕಥೆ, ಕವನಗಳು ತುಮಕೂರು ವಿಶ್ವವಿದ್ಯಾಲಯ ಪದವಿ ತರಗತಿಗಳಿಗೆ ಪಠ್ಯವಾಗಿವೆ. ಇವರ ಕಥೆಗಳು ...

READ MORE

Related Books