ಬಟುಕೇಶ್ವರ ದತ್ತ

Author : ಎನ್.ಪಿ. ಶಂಕರನಾರಾಯಣ ರಾವ್

Pages 120

₹ 15.00




Year of Publication: 1974
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019
Phone: 9945036300

Synopsys

`ಬಟುಕೇಶ್ವರ ದತ್ತ' ಎಂಬುದು ಜೀವನ ಚರಿತ್ರೆಯ ಪುಸ್ತಕ. ಲೇಖಕ ಎನ್.ಪಿ. ಶಂಕರನಾರಾಯಣ ರಾವ್ ರಚಿಸಿದ್ದಾರೆ. ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರರು. ಭಾರತದಲ್ಲಿ, ಅಂಡಮಾನಿನಲ್ಲಿ ಸೆರೆಮನೆಗಳ ತೀಕ್ಷ್ಣ ಕ್ರೌರ್ಯವನ್ನು ಅನುಭವಿಸಿದರು. ದೇಶ ಸ್ವತಂತ್ರವಾಗುವವರೆಗೆ ಅವರ ಹೋರಾಟ ನಿಲ್ಲಲಿಲ್ಲ. ಸ್ವತಂತ್ರವಾದ ಮೇಲೆ ತಮ್ಮ ಹೋರಾಟದಿಂದ ವೈಯಕ್ತಿಕ ಲಾಭ ಪಡೆಯಲು ಅವರು ಇಷ್ಟ ಪಡಲಿಲ್ಲ ಎಂದು ಬಟುಕೇಶ್ವರ ದತ್ತ ಅವರ ಕುರಿತು ಈ ಕೃತಿಯಲ್ಲಿ ವಿವರಿಸಲಾಗಿದೆ. ಬಟುಕೇಶ್ವರ ದತ್ತ ಅವರ ಬಾಲ್ಯ ಜೀವನ, ಸ್ವಾತಂತ್ರ್ಯ ಹೋರಾಟಕ್ಕೆ ಪಡೆದ ಪ್ರೇರಣೆ, ಬ್ರಿಟಿಷರ ವಿರುದ್ದ ತೊಡೆ ತಟ್ಟಿದ ಪರಿ, ಸೆರೆಮನೆ ವಾಸದ ದಿನಗಳು, ದೇಶ ಸ್ವಾತಂತ್ರ್ಯ ಪಡೆದ ಮೇಲಿನ ಕಥನ ಹೀಗೆ ಅವರ ಬದುಕಿನ ಅಪರೂಪದ ಘಟನೆಗಳನ್ನು ಲೇಖಕರು ಈ ಕೃತಿಯಲ್ಲಿ ಚಿತ್ರಿಸಿದ್ದಾರೆ.

About the Author

ಎನ್.ಪಿ. ಶಂಕರನಾರಾಯಣ ರಾವ್
(03 August 1928 - 28 November 2006)

.ಎನ್.ಪಿ. ಶಂಕರ ನಾರಾಯಣ ರಾವ್ ಅವರು 1928ರ ಆಗಸ್ಟ್ 03ರಂದು ಹಾಸನ ಜಿಲ್ಲೆಯ ನಿಟ್ಟೂರು ಗ್ರಾಮದವರು. ತಂದೆ ಪಟ್ಟಾಭಿರಾಮಯ್ಯ ಹಾಗೂ ತಾಯಿ ಅಚ್ಚಮ್ಮ. ತಂದೆ ಸಬ್ ರಿಜಿಸ್ಟ್ರಾರ್ ಇದ್ದರು. ವರ್ಗಾವಣೆ ಆದ ಕಡೆ ಇವರ ವಿದ್ಯಾಭ್ಯಾಸ ಅನಿವಾರ್ಯವಾಯಿತು. ಬೆಂಗಳೂರಿನ ಶ್ರೀರಾಮಪುರದಲ್ಲಿ ಪ್ರಾಥಮಿಕ ಶಿಕ್ಷಂ, ಕನಕಪುರದ ಕಾನಕಾನಹಳ್ಳಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಆನೇಕಲ್ ಹಾಗೂ ಬಸವನಹಳ್ಳಿಯಲ್ಲಿ ಮಾಧ್ಯಮಿಕ ಹಾಗೂ ಮೈಸೂರಿನಲ್ಲಿ ಪ್ರೌಢ ಶಿಕ್ಷಣ ಪೂರೈಸಿದರು. ಆ ಕಾಲದಲ್ಲಿ ಸ್ವಾತಂತ್ಯ್ರ ಚಳವಳಿ ಆರಂಭವಾಗಿ, ಜೈಲುವಾಸ ಅನುಭವಿಸಿದರು. ಮೈಸೂರು ಸ್ಟೂಡೆಂಟ್ಸ್ ಯೂನಿಯನ್ ಸ್ಥಾಪಿಸಿ ಎಡ ಪಂಥೀಯ ವಿಚಾರಗಳೊಂದಿಗೆ ಹೋರಾಟ ನಡೆಸಿದರು. ಮೈಸೂರು ಪುರಸಭಾ ಕಾರ್ಮಿಕ ಸಂಘದ ...

READ MORE

Related Books