ಬಯಲಾಟ ಲೇಖನಗಳು

Author : ಶ್ರೀರಾಮ ಇಟ್ಟಣ್ಣವರ

Pages 250

₹ 200.00




Year of Publication: 2019
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ವಿದ್ಯಾರಣ್ಯ, ಹಂಪಿ-583276, ಹೊಸಪೇಟೆ ತಾಲೂಕು, ಬಳ್ಳಾರಿ ಜಿಲ್ಲೆ.

Synopsys

ಜಾನಪದ ತಜ್ಞ ಶ್ರೀ ರಾಮ ಇಟ್ಟಣ್ಣವರ  ಅವರ ಕೃತಿ-’ಬಯಲಾಟ ಲೇಖನಗಳು’ . ಬಯಲಾಟಕ್ಕೆ ಸಂಬಂಧಿಸಿದ ಒಟ್ಟು 12 ಲೇಖನಗಳು ಇಲ್ಲಿ ಸಂಕಲನಗೊಂಡಿವೆ. ಬೆಳಗಾವಿಯಲ್ಲಿ ಏರ್ಪಟ್ಟ ಅಖಿಲ ಭಾರತ ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಮಾಡಿದ ಸರ್ವಾಧ್ಯಕ್ಷ ಭಾಷಣದ ಪಠ್ಯವನ್ನೂ ಇಲ್ಲಿ ನೀಡಲಾಗಿದೆ.  ಬಯಲಾಟಕ್ಕೆ ಪೂರಕವಾಗಿರುವ ರಂಗಪರಿಕರ, ಪ್ರಸಾಧನ ಕುರಿತಾಗಿ ಕೆಲವು ಲೇಖನಗಳಿವೆ. ಕೆಲವೊಂದು ಲೇಖನಗಳು ಬಯಲಾಟದ ಪರಿಷ್ಕರಣೆ ಹಾಗೂ ಮರುಹುಟ್ಟಿನ ಬಗೆಯನ್ನು ವಿಶ್ಲೇಷಿಸುತ್ತವೆ. 

About the Author

ಶ್ರೀರಾಮ ಇಟ್ಟಣ್ಣವರ
(01 June 1948)

ಶ್ರೀಕೃಷ್ಣ ಪಾರಿಜಾತ- ಒಂದು ಅಧ್ಯಯನ ಎಂಬ ವಿಷಯದ ಮೇಲೆ ಪಿಎಚ್‌.ಡಿ . ಪದವಿ ಪಡೆದಿರುವ ಶ್ರೀರಾಮ ಇಟ್ಟಣ್ಣವರ ಅವರು ಬೀಳಗಿಯ ಶ್ರೀಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕ ಬಯಲಾಟ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾಗಿರುವ ಇಟ್ಟಣ್ಣವರ ಅವರು ಬಯಲಾಟ-ಕೃಷ್ಣ ಪಾರಿಜಾತ ಹಾಗೂ ಜಾನಪದ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಹೊಳಿಸಾಲ ಬಳ್ಳಿ; ಗಾಲಿ ಉಳ್ಳತೈತಿ; ನೂರು ಶಿಶುಗೀತೆಗಳು; ಹಾಡುಣು ಬಾಪ್ರೇಮದ ಪಾಡಾ; ಹೊತ್ತು ಮೂಡುವ ಸಮಯ (ಕಾವ್ಯ), ಪಾರಿಜಾತದವರು (ನಾಟಕ),  ಜನಪದ ಪಶುವೈದ್ಯ ಬೀಳಗಿ ಸಿದ್ಧಪ್ಪ; ಕೊಣ್ಣೂರ ಕರಿಸಿದ್ದೇಶ್ವರ ದೇವಸ್ಥಾನ (ಜಾನಪದೀಯ) ಹಲಗಲಿ-ಗ್ರಾಮ ಚಾನಪದ (ಅಧ್ಯಯನ), ಲಾವಣಿ: ಸಣ್ಣಾಟ (ಸಂಶೋಧನೆ)  ತಟ್ಟಿ ಚಿನ್ನ-ಸಣ್ಣಾಟ; ...

READ MORE

Related Books