ಬೀರಬಲ್ಲನ ಕಥೆಗಳು

Author : ಸು. ರುದ್ರಮೂರ್ತಿ ಶಾಸ್ತ್ರಿ

Pages 205

₹ 135.00




Year of Publication: 2018
Published by: ಸನ್ನಿಧಿ ಪ್ರಕಾಶನ
Address: ಬೆಂಗಳೂರು

Synopsys

ಲೇಖಕ ಸು. ರುದ್ರಮೂರ್ತಿ ಅವರ ಕೃತಿ ಬೀರಬಲ್ಲನ ಕಥೆಗಳು. ಮೊಗಲ್ ಸಾಮ್ರಾಜ್ಯದ ಅಕ್ಬರನ ಆಸ್ಥಾನದಲ್ಲಿ ಬೀರಬಲ್ಲನು ಮಂತ್ರಿಯಾಗಿದ್ದು, ಅವನು ವಿದೂಷಕನೂ ಆಗಿದ್ದ. ಕಥೆಗಳ ಮೂಲಕ, ಬುದ್ಧಿಶಕ್ತಿ-ಸಾಮರ್ಥ್ಯದ ಮೂಲಕ ಅರಸೊತ್ತಿಗೆ ಮುಂದೆ ಬರುವ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿದ್ದ. ಈತನ ಕಥೆಗಳು ಬುದ್ಧಿವಂತಿಕೆಗೆ, ಜಾಣ್ಮೆಗೆ, ವಿವಾದಗಳ ಪರಿಹಾರಕ್ಕೆ ವಿವೇಕಯುತವಾದ ಸಕಾಲಿಕ ಉತ್ತರಗಳಾಗಿವೆ. ತರ್ಕಶಕ್ತಿಯನ್ನು ಹೆಚ್ಚಿಸುತ್ತವೆ. ಬೀರಬಲ್ಲನ ಕಥೆಗಳೆಂದೇ ಖ್ಯಾತಿ ಪಡೆದ ಈ ಕಥೆಗಳನ್ನು ಲೇಖಕರು ಸರಳ ಕನ್ನಡದಲ್ಲಿ ಮಕ್ಕಳಿಗಾಗಿ ಸಂಪಾದಿಸಿ ಕೊಟ್ಟಿರುವುದು ಈ ಕೃತಿಯ ವೈಶಿಷ್ಟ್ಯ.

About the Author

ಸು. ರುದ್ರಮೂರ್ತಿ ಶಾಸ್ತ್ರಿ
(11 November 1948)

ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...

READ MORE

Related Books