ಬೆಳಕಿಗೊಂದು ಗವಾಕ್ಷಿ

Author : ಜಿ.ಎನ್. ರಂಗನಾಥ ರಾವ್

Pages 264

₹ 225.00




Year of Publication: 2020
Published by: ಸಪ್ನ ಬುಕ್ ಹೌಸ್
Address: #11, 3 ನೇ ಮುಖ್ಯ ರಸ್ತೆ, ಗಾಂಧಿ ನಗರ , ಬೆಂಗಳೂರು-560009
Phone: 08040114455

Synopsys

ಹಿರಿಯ ಲೇಖಕ-ಪತ್ರಕರ್ತ-ಅನುವಾದಕ ಜಿ.ಎನ್ ರಂಗನಾಥ ರಾವ್ ಅವರ ಅಂಕಣ ಬರಹಗಳ ಕೃತಿ-ಬೆಳಕಿಗೊಂದು ಗವಾಕ್ಷಿ. ಲೇಖಕರ ಈ ಅಂಕಣದ ಕೇಂದ್ರಬಿಂದು ಸಾಹಿತ್ಯವಾಗಿದೆ. ಈ ಬರಹ ಕೇಂದ್ರದ ಪರಿಧಿಯಲ್ಲೇ ಸೃಜನಶೀಲಗೊಳ್ಳುತ್ತಾ, ಸುತ್ತಲ ಪ್ರಪಂಚದ ಆಗುಹೋಗುಗಳನ್ನು ಗಮನಿಸುತ್ತಾ, ಅಲ್ಲಿರುವ ವಿಚಾರಗಳಿಗೆ ಸ್ಪಂದಿಸುತ್ತಾ ಬಂದಿದೆ. ಅಲ್ಪಮಟ್ಟಿಗೆ, ರಾಜಕೀಯ ಪ್ರಸ್ತಾಪಗಳು ಈ ಕೃತಿಯಲ್ಲಿ ಕಂಡುಬರುತ್ತದೆ. ಅಭಿವ್ಯಕ್ತಿ ಸ್ವಾತಂತ್ಯ್ರದ ಬಗೆ ಹಾಗೂ ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ಯ್ರ ಹೇಗೆ ಕಾರ್ಯನಿರ್ವಹಿಸುತ್ತದೆ ಎನ್ನುವುದನ್ನುಲೇಖಕರು ತಮ್ಮ ಬರಹಗಳಲ್ಲಿ ವಿಶ್ಲೇಷಿಸಿದ್ದಾರೆ.

About the Author

ಜಿ.ಎನ್. ರಂಗನಾಥ ರಾವ್
(12 January 1942 - 09 October 2023)

ನಾಡಿನ ಖ್ಯಾತ ಪತ್ರಕರ್ತ, ಹಿರಿಯ ಲೇಖಕ ಜಿ.ಎನ್.ರಂಗನಾಥ ರಾವ್ ಮೂಲತಃ ಬೆಂಗಳೂರಿನ ಹಾರೋಹಳ್ಳಿಯವರು. 1942 ರಲ್ಲಿ ಜನಿಸಿದ ಅವರು, ಕನ್ನಡ ಪತ್ರಿಕೋದ್ಯಮದಲ್ಲಿ ಹಲವು ಮೈಲಿಗಲ್ಲುಗಳನ್ನು ನಿರ್ಮಿಸಿದ್ದಾರೆ.   ಹೊಸಕೋಟೆ ಹಾಗೂ ಬೆಂಗಳೂರು ನಗರಗಳಲ್ಲಿ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿ, ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಉಪ ಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದ್ದ ಅವರು ’ನವರಂಗ’ ಕಾವ್ಯನಾಮದಿಂದ ಕೂಡ ಬರವಣಿಗೆ ಮಾಡಿದ್ದರು. ಅಲ್ಲದೇ ಪ್ರಜಾವಾಣಿ ದಿನಪತ್ರಿಕೆಯ ಕಾರ್ಯ ನಿರ್ವಾಹಕ ಸಂಪಾದಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ಸಾಹಿತ್ಯ ಕ್ಷೇತ್ರದಲ್ಲಿಯೂ ಮಹತ್ವದ ಕಾರ್ಯ ನಿರ್ವಹಿಸಿದ್ದ ರಂಗನಾಥ ರಾವ್ ಕಾದಂಬರಿ, ಸಣ್ಣಕತೆ, ನಾಟಕ, ಪ್ರಬಂಧ ಸೇರಿದಂತೆ ಸಾಹಿತ್ಯದ ಹಲವು  ಪ್ರಕಾರಗಳಲ್ಲಿ ...

READ MORE

Related Books