ಬೆಂದ್ರೆ ಕಾವ್ಯ ಮತ್ತು ಜಾನಪದ

Author : ಬಸವರಾಜ ಸಬರದ

Pages 58

₹ 5.00




Year of Publication: 2008
Published by: ಪ್ರಸಾರಾಂಗ
Address: ಗುಲಬರ್ಗಾ, ವಿಶ್ವವಿದ್ಯಾಲಯ, ಗುಲಬರ್ಗಾ

Synopsys

‘ಬೆಂದ್ರೆ ಕಾವ್ಯ ಮತ್ತು ಜಾನಪದ’ ಲೇಖಕ ಡಾ. ಬಸವರಾಜ ಸಬರದ ಅವರ ಉಪನ್ಯಾಸದ ಪಠ್ಯರೂಪ. ಕೃತಿಯ ಕುರಿತು ತಿಳಿಸುತ್ತಾ ‘ದಿನಾಂಕ: 02-02-2006ರಂದು ಗಂಗಾವತಿಯಲ್ಲಿ, ವಿಶ್ವವಿದ್ಯಾಲಯದ ಪ್ರಸಾರಾಂಗವು ಏರ್ಪಡಿಸಿದ್ದ ಪ್ರಜಾರೋಪನ್ಯಾಸ ಮಾಲೆಯಲ್ಲಿ ನಾನು ಮಾಡಿದ ಉಪನ್ಯಾಸ ಈಗ ತಮ್ಮ ಕೈಯಲ್ಲಿ ಕೃತಿರೂಪದಲ್ಲಿದೆ. ಬೇಂದ್ರೆ ಕಾವ್ಯದಲ್ಲಿ ಸಮ್ಮಿಳಿತವಾಗಿರುವ ಜಾನಪದದ ಸಾಧ್ಯತೆಗಳನ್ನು ಈ ಕಿರುಕೃತಿಯಲ್ಲಿ ಗುರುತಿಸಲು ಪ್ರಯತ್ನಿಸಿದ್ದೇನೆ ಎಂದಿದ್ದಾರೆ. ಈ ಕೃತಿಯಲ್ಲಿ ಲೇಖಕರ ನುಡಿ, ಕುಲಪತಿಗಳ ನುಡಿ, ನಿರ್ದೇಶಕರ ಮಾತು, ಪ್ರಾಸ್ತಾವಿಕದ ಜೊತೆಗೆ ಬೇಂದ್ರೆಕಾವ್ಯದ ರಾಚನಿಕ-ಸ್ವರೂಪ, ಕಾವ್ಯಭಾಷೆ, ಒಗಟು-ಗಾದೆ-ಪಡೆನುಡಿ, ಜಾನಪದ ಜೀವನ ಹಾಗೂ ಸಮಾರೋಪ ಎಂಬ ಲೇಖನಗಳು ಸಂಕಲನಗೊಂಡಿವೆ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books