ಬೇಂದ್ರೆ ಕಂಡ ಶ್ರಾವಣ

Author : ದ.ರಾ. ಬೇಂದ್ರೆ (ಅಂಬಿಕಾತನಯದತ್ತ)

Pages 88

₹ 45.00




Published by: ದ.ರಾ. ಬೇಂದ್ರೆ ಸಂಶೋಧನ ಸಂಸ್ಥೆ, ಹುಬ್ಬಳ್ಳಿ

Synopsys

ಕವಿ ಬೇಂದ್ರೆಯವರು ಕನ್ನಡ ಸಾಹಿತ್ಯದಲ್ಲಿ ’ಶ್ರಾವಣದ ಕವಿ’ ಎಂದೇ ಚಿರಪರಿಚಿತರು. ಶ್ರಾವಣ ಬೇಂದ್ರೆಯವರಿಗೆ ಪ್ರಿಯವಾದ ಕಾಲ. ಶ್ರಾವಣದ ಸೊನೆ, ಧಾರವಾಡದ ಸಮೃದ್ಧ ಹಸಿರು ವಾತಾವರಣ ಬೇಂದ್ರೆಯವರ ಬಹುತೇಕ ಸಂಕಲನಗಳಲ್ಲಿ ಕವಿತೆಯಾಗಿ ಒಡಮೂಡಿದೆ. ಶ್ರಾವಣ ಕುರಿತು ಬೇಂದ್ರೆಯವರು ರಚಿಸಿದ ಕವಿತೆಗಳು ಈ ಸಂಕಲನದಲ್ಲಿವೆ. ಕವಿಪುತ್ರ ವಾಮನ ಬೇಂದ್ರೆಯವರು ವಿವಿಧ ಸಂಕಲನಗಳಲ್ಲಿ ಇರುವ ಶ್ರಾವಣಕ್ಕೆ ಸಂಬಂಧಿಸಿದ ಕವಿತೆಗಳನ್ನು ಆಯ್ದು ಈ ಸಂಕಲನದಲ್ಲಿ ಸೇರಿಸಿದ್ದಾರೆ.

About the Author

ದ.ರಾ. ಬೇಂದ್ರೆ (ಅಂಬಿಕಾತನಯದತ್ತ)
(31 January 1896 - 26 October 1981)

ಕನ್ನಡ ಕಾವ್ಯದ ಸೊಬಗು-ಸೊಗಸು ಹೆಚ್ಚಿಸಿದ ‘ಅಂಬಿಕಾತನಯದತ್ತ’ ಕಾವ್ಯನಾಮದ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರನ್ನು ‘ವರಕವಿ’, ‘ಗಾರುಡಿಗ’ ಎಂದು ಗುರುತಿಸಲಾಗುತ್ತದೆ. ತಂದೆ ರಾಮಚಂದ್ರ ತಾಯಿ ಅಂಬವ್ವ. ಧಾರವಾಡದಲ್ಲಿ 1896ರ ಜನವರಿ 31ರಂದು ಜನಿಸಿದರು. ಧಾರವಾಡದಲ್ಲಿ ಮೆಟ್ರಿಕ್ (1913) ಮುಗಿಸಿದ ಮೇಲೆ ಪುಣೆಯ ಫರ್ಗ್ಯುಸನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಬಿ.ಎ. (1918) ಪದವಿ ಪಡೆದರು. ಕೆಲವು ಕಾಲ ಅಧ್ಯಾಪಕ ವೃತ್ತಿ ಮಾಡಿದ ಮೇಲೆ ಮುಂಬಯಿ ವಿಶ್ವವಿದ್ಯಾನಿಲಯದಿಂದ ಎಂ.ಎ. (1935) ಪದವಿ ಪೂರ್ಣಗೊಳಿಸಿದರು. ಗದುಗಿನ ವಿದ್ಯಾದಾನ ಸಮಿತಿ ಪ್ರೌಢಶಾಲೆಯಲ್ಲಿ ಹೆಡ್ ಮಾಸ್ಟರ್ ಆಗಿ ವೃತ್ತಿ ಆರಂಭಿಸಿದ ಅವರು ನಂತರ ಹುಬ್ಬಳ್ಳಿಯ ನ್ಯೂ ...

READ MORE

Related Books