ಬೆಂಗಳೂರು (ಕಾದಂಬರಿ)

Author : ಜೋಗಿ (ಗಿರೀಶ್ ರಾವ್ ಹತ್ವಾರ್)

Pages 160

₹ 130.00




Year of Publication: 2016
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 080 2661 7100

Synopsys

ಲೇಖಕ ಜೋಗಿ (ಗಿರೀಶ್ ರಾವ್ ಹತ್ವಾರ್) ಅವರ ಕಾದಂಬರಿ -ಬೆಂಗಳೂರು. ಹುಚ್ಚು ಬಿಸಿಲು, ಹುಚ್ಚು ಧಗೆ ಹುಚ್ಚೆದ್ದಿದೆ ಕ್ರೌರ್ಯ ಎಂಬುದು ಕೃತಿಯ ಉಪಶೀರ್ಷಿಕೆ. ಹುಟ್ಟಿದ ಊರು ಸಿದ್ದಕಟ್ಟೆ ಮತ್ತು ನೆಲೆಯೂರಿದ ಬೆಂಗಳೂರನ್ನು ಒಂದೇ ಸೂತ್ರದಲ್ಲಿ ಹೆಣೆಯುವ ನರಸಿಂಹ ಭಿಡೆ ಎಂಬಾತನ ಕಥನವೇ ಇಲ್ಲಿಯ ವಸ್ತು. ಮನುಷ್ಯನ ಕ್ರೌರ್ಯದ  ನೆಲೆಗಳನ್ನು ಶೋಧಿಸುವ ಪ್ರಯತ್ನ ಇಲ್ಲಿದೆ. ಪ್ರೀತಿಯನ್ನು ಸೃಷ್ಟಿಸ ಲಾಗದ ನರಸಿಂಹ, ಮನೆಯ ಎಲ್ಲ ಸದಸ್ಯರ ಮೇಲೂ ರೇಗಾಡುತ್ತಾನೆ. ‘ಇಲ್ಲಿ ಬೇರು ಬಿಡುತ್ತೇನೆ ಅನ್ನುವುದು ಭ್ರಮೆ. ಬೆಂಗಳೂರು ನೆಲೆಯಲ್ಲ, ಪ್ಲಾಟ್-ಫಾರ್ಮು. ನೆಲವಲ್ಲ, ರಿಯಲ್ ಎಸ್ಟೇಟು. ಈ ಊರಿಗೆ ನೆನಪುಗಳನ್ನು ಸೃಷ್ಟಿಸುವ ಶಕ್ತಿಯೂ ಇಲ್ಲ. ಇದೊಂದು ಕರ್ಮಭೂಮಿ. ಇಲ್ಲಿಗೆ ಮಂದಿ ದುಡಿಯುವುದಕ್ಕೆ ಬರುತ್ತಾರೆ. ಕೈದಿಗಳಂತೆ ದುಡಿಯುತ್ತಾರೆ. ಮತ್ತೆ ತಮ್ಮೂರಿಗೆ ಮರಳಬೇಕು ಎಂದು ಹಂಬಲಿಸುತ್ತಾರೆ. ಆದರೆ ಬೆಂಗಳೂರು ಅವರನ್ನು ಮರಳಲು ಬಿಡುವುದಿಲ್ಲ. ಅಭಿಮನ್ಯುವಿನ ಉತ್ಸಾಹ ಮತ್ತು ಹುಮ್ಮಸ್ಸಿನಿಂದ ಈ ಚಕ್ರ ವ್ಯೂಹದ ಒಳಹೊಕ್ಕ ವರು ಹೋರಾಡಿಯೇ ಮಡಿಯಬೇಕು’ ಎಂಬ ನರಸಿಂಹನ ಮಾತುಗಳು’ ಕಾದಂಬರಿ ಪರಿಣಾಮಕತೆಯನ್ನು ಹೆಚ್ಚಿಸುತ್ತವೆ. 

About the Author

ಜೋಗಿ (ಗಿರೀಶ್ ರಾವ್ ಹತ್ವಾರ್)
(16 November 1965)

ಜೋಗಿ, ಜಾನಕಿ, ಎಚ್‌. ಗಿರೀಶ್‌ ರಾವ್, ಸತ್ಯವ್ರತ...... ಹೀಗೆ ವಿವಿಧ ಅಂಕಿತನಾಮಗಳ ಮೂಲಕವೇ ಓದುಗರನ್ನು ತಲುಪಿದವರು ಗಿರೀಶ್‌ ರಾವ್‌ ಹತ್ವಾರ್‌ (ಜೋಗಿ). ವೃತ್ತಿಯಲ್ಲಿ ಪತ್ರಕರ್ತರಾಗಿರುವ ಜೋಗಿ ಅವರು ಹುಟ್ಟಿದ್ದು 1965 ನವೆಂಬರ್‌ 16ರಂದು. ಮೂಲತಃ ಸೂರತ್ಕಲ್‌ ಸಮೀಪದ ಹೊಸಬೆಟ್ಟು ಊರಿನವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.  ಹಾಯ್‌ ಬೆಂಗಳೂರು ವಾರಪತ್ರಿಕೆಯಲ್ಲಿ ‘ರವಿ ಕಾಣದ್ದು’, ‘ಜಾನಕಿ ಕಾಲಂ’ ಅಂಕಣ ಬರಹಗಳ ಮೂಲಕ ಓದುಗರಿಗೆ ಪರಿಚಯವಾದ ಜೋಗಿ ಅವರು ಪ್ರಸ್ತುತ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ವೃತ್ತಿ ಜೊತೆ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಇವರು ಹಲವಾರು ಕೃತಿಗಳನ್ನು ...

READ MORE

Related Books