ಬೆರಕೆ ಸೊಪ್ಪು

Author : ಕೇಶವರೆಡ್ಡಿ ಹಂದ್ರಾಳ

Pages 212

₹ 180.00




Year of Publication: 2022
Published by: ಸಪ್ನ ಬುಕ್ ಹೌಸ್
Address: # 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು

Synopsys

ಕಥೆ-ಕಾದಂಬರಿ ಸಾಹಿತ್ಯ ರಚನೆಯಲ್ಲಿ ಪ್ರಸಿದ್ಧಿ ಪಡೆದ ಲೇಖಕ ಕೇಶವರೆಡ್ಡಿ ಹಂದ್ರಾಳ ಅವರ ಪ್ರಬಂಧಗಳ ಸಂಕಲನವಿದು-ಬೆರಕೆ ಸೊಪ್ಪು. ಪ್ರಬಂಧಗಳಲ್ಲಿ ವಸ್ತು ವೈವಿಧ್ಯತೆ ಇದೆ. ನಿರೂಪಣಾ ಶೈಲಿಯು ಆಕರ್ಷಕವಾಗಿದೆ. ತಮ್ಮ ಅನುಭವದ ವಿಸ್ತಾರ ಹಾಗೂ ಆಳವನ್ನು ಪ್ರಬಂಧಗಳಲ್ಲಿ ಬಿಂಬಿಸಿದ್ದನ್ನು ಕಾಣಬಹುದು. ಎಲ್ಲ ಪ್ರಬಂಧಗಳಲ್ಲಿಯೂ ಲೇಖಕನಿಗಿರಬೇಕಾದ ಸಾಮಾಜಿಕ ಹೊಣೆಗಾರಿಕೆಯ ಅಂಶಗಳನ್ನು ಕಾಣಬಹುದು. ಹೀಗಾಗಿ, ಇಲ್ಲಿಯ ಪ್ರಬಂಧಗಳು ಹೆಚ್ಚು ಅರ್ಥಪೂರ್ಣವೆನಿಸಿ, ಓದುಗರ ಗಮನ ಸೆಳೆಯುತ್ತವೆ.

About the Author

ಕೇಶವರೆಡ್ಡಿ ಹಂದ್ರಾಳ
(22 July 1957)

ಕನ್ನಡದ ಪ್ರಮುಖ ಕಥೆಗಾರರಲ್ಲಿ ಒಬ್ಬರಾದ ಕೇಶವರೆಡ್ಡಿ ಹಂದ್ರಾಳ ಅವರು 22-07-1957 ರಲ್ಲಿ ಮಧುಗಿರಿ ತಾಲೂಕಿನ ಹಂದ್ರಾಳದಲ್ಲಿ ಜನಿಸಿದರು. ತಂದೆ ತಾಯಿ ಇಬ್ಬರೂ ಅನಕ್ಷರಸ್ಥರು . ಕೃಷಿ ಕೆಲಸಗಳನ್ನು ಮಾಡಿಕೊಂಡೇ ಹಂದ್ರಾಳದ ಪ್ರೈಮರಿ ಸ್ಕೂಲು , ಬ್ಯಾಲ್ಯದ ಮಿಡ್ಲಿಸ್ಕೂಲು ಪೂರೈಸಿದ್ದು . ತಾತ ನರಸಿಂಹರೆಡ್ಡಿ ಆಂಧ್ರದ ಅನಂತಪುರ ಜಿಲ್ಲೆಯ ಊರೊಂದರ ಜಮೀನುದಾರ . ಕಳೆದ ಶತಮಾನದ ಇಪ್ಪತ್ತರ ದಶಕದಲ್ಲಿ ಆ ಸೀಮೆಯ ಶೋಷಕ ಬ್ರಿಟಿಷ್ ಕಲೆಕ್ಟರ್ ನನ್ನು ಖೂನಿ ಮಾಡಿ ರಾತ್ರೋರಾತ್ರಿ ಕರ್ನಾಟಕದ ಕಡೆ ಪ್ರಯಾಣ .  ಕಾಪು ರೆಡ್ಡಿಯಾಗಿದ್ದ ತಾತ ಮದುವೆಯಾಗಿದ್ದು ಕಮ್ಮ ಜಾತಿಯ ಅಜ್ಜಿಯನ್ನು . 1947 ...

READ MORE

Related Books