ಭಗವದ್ಗೀತೆ - ಒಂದು ಅವಲೋಕನ

Author : ಜಿ. ರಾಮಕೃಷ್ಣ

Pages 164

₹ 150.00

Buy Now


Year of Publication: 2018
Published by: ನವಕರ್ನಾಟಕ ಪ್ರಕಾಶನ
Address: ಎಂಬಸ್ಸಿ ಸೆಂಟರ್‍ 11 ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಶೇಷಾದ್ರಿಪುರಂ, ಬೆಂಗಳೂರು, 560001
Phone: 080-30578020

Synopsys

ಭಗವದ್ಗೀತೆಯ ಕುರಿತಂತೆ ರಾಜಕಾರಣಿಗಳು ಮಾತನಾಡಲು ಶುರು ಹಚ್ಚಿರುವ ಈ ದಿನಗಳಲ್ಲಿ ಭಗವದ್ಗೀತೆಯನ್ನು, ಅದರೊಳಗಿರುವ ತಾತ್ವಿಕ ಸಂಗತಿಗಳನ್ನು ನಿಜಕ್ಕೂ ಅರಿತವರ ಧ್ವನಿ ಕೇಳಿಸುತ್ತಿಲ್ಲ. ಬದಲಿಗೆ ಭಗವದ್ಗೀತೆಯ ಒಂದು ಸಾಲನ್ನೂ ಓದದ, ಅದನ್ನು ಅರ್ಥ ಮಾಡಿಕೊಳ್ಳದ ರಾಜಕಾರಣಿಗಳು ಬೀದಿ ಬದಿಯಲ್ಲಿ ನಿಂತು ಗದ್ದಲ ಎಬ್ಬಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಖ್ಯಾತ ಚಿಂತಕ ಜಿ. ರಾಮಕೃಷ್ಣ ಅವರು “ಭಗವದ್ಗೀತೆ - ಒಂದು ಅವಲೋಕನ' ಕೃತಿಯನ್ನು ಹೊರತಂದಿದ್ದಾರೆ. ಇಲ್ಲಿ ಜಿ. ರಾಮಕೃಷ್ಣ ಅವರು ಅನಗತ್ಯವಾಗಿ ಭಗವದ್ಗೀತೆಯ ವಿಮರ್ಶೆಗೆ ಇಳಿದಿಲ್ಲ. ಅಥವಾ ಟೀಕೆಯೂ ಅವರ ಉದ್ದೇಶವಲ್ಲ. ಅವೆಲ್ಲದರ ಬದಲಿಗೆ, ಚಾರಿತ್ರಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ನೆಲೆಗಳಲ್ಲಿ ಭಗವದ್ಗೀತೆಯ ಪ್ರಾಮುಖ್ಯತೆಯೇನು ಎಂಬುದರತ್ತ ಓದುಗರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. ಒಂದೆಡೆ ಭಗವದ್ಗೀತೆ ಪರಮಶ್ರೇಷ್ಠ ಎಂದು ನಂಬುವವರಾದರೆ, ಇನ್ನೊಂದೆಡೆ ಭಗವದ್ಗೀತೆಯನ್ನು ಸಾರಾಸಗಟಾಗಿ ಬದಿಗೆ ತಳ್ಳುವವರ ನಡುವೆ, ರಾಮಕೃಷ್ಣ ವಿಚಾರ ಒಂದು ಭಿನ್ನ ದಿಕ್ಕನ್ನು ತೋರಿಸಿಕೊಡುತ್ತದೆ.

About the Author

ಜಿ. ರಾಮಕೃಷ್ಣ

ಜಿ. ರಾಮಕೃಷ್ಣ ಸಂಸ್ಕೃತದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಮತ್ತು ಪಿಎಚ್.ಡಿ. ಪದವಿಗಳನ್ನೂ, ಪುಣೆ ಹಾಗೂ ವೇಲ್ ವಿಶ್ವವಿದ್ಯಾನಿಲಯಗಳಿಂದ ಇಂಗ್ಲಿಷ್‌ನಲ್ಲಿ ಎಂ.ಎ. ಪದವಿಗಳನ್ನೂ ಪಡೆದಿದ್ದಾರೆ. ಮಹಾಡಿನ ಡಾ.ಅಂಬೇಡ್ಕರ್ ಕಾಲೇಜು ಮತ್ತು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜುಗಳಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸುಮಾರು ಮೂವತ್ತು ವರ್ಷ ಕೆಲಸ ಮಾಡಿದ್ದಾರೆ, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿದ್ದುಕೊಂಡು “ಭಾರತೀಯ ವಿಜ್ಞಾನದ ಹಾದಿ” ಎಂಬ ಮೌಲಿಕ ಕೃತಿಯನ್ನು ರಚಿಸಿದ್ದಾರೆ. ಇವರ “ಮುನ್ನೋಟ' ಹಾಗೂ 'ಆಯತನ' ಗ್ರಂಥಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಲಭ್ಯವಾಗಿದೆ. ಮಾರ್ಕ್ಸ್‌ವಾದಿ ಅಧ್ಯಯನಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಭಗತ್‌ಸಿಂಗ್, ಚೆ ಗೆವಾರಾ, ...

READ MORE

Related Books