ಭಾರತರತ್ನ ಸಿ.ಎನ್. ಆರ್. ರಾವ್

Author : ಟಿ. ಆರ್. ಅನಂತರಾಮು

Pages 108

₹ 65.00




Year of Publication: 2014
Published by: ಸಪ್ನ ಬುಕ್ ಹೌಸ್
Address: 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು- 560 009
Phone: 08040114455

Synopsys

ಪ್ರೊ. ಸಿ.ಎನ್.ಆರ್. ರಾವ್ ಅವರು ರಸಾಯನ ವಿಜ್ಞಾನದ ಕೊಡುಗೆಗಳಿಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತರಾದವರು. ವಯಸ್ಸು 80 ದಾಟಿದರೂ ಅವರ ಉತ್ಸಾಹಕ್ಕೆ ಭಂಗ ಬಂದಿಲ್ಲ. ಕಿರಿಯ ವಿಜ್ಞಾನಿಗಳಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ತಮ್ಮ ಸುದೀರ್ಘ ಸಂಶೋಧನ ಬದುಕಿನಲ್ಲಿ 1,600ಕ್ಕೂ ಅಧಿಕ ಉಚ್ಚಮಟ್ಟದ ಸಂಶೋಧನ ಲೇಖನಗಳನ್ನು ಪ್ರಕಟಿಸಿದ್ದಾರೆ. 150 ಮಂದಿ ಸಂಶೋಧನ ವಿದ್ಯಾರ್ಥಿಗಳಿಗೆ ಪಿಎಚ್.ಡಿ. ಮಾರ್ಗದರ್ಶಕರಾಗಿದ್ದಾರೆ. ಅವರ ವೈಜ್ಞಾನಿಕ ಸಂಶೋಧನೆಗಳನ್ನು ಪರಿಗಣಿಸಿ ಸಿ 60 ವಿಶ್ವವಿದ್ಯಾಲಯಗಳು ಅವರಿಗೆ ಗೌರವ ಡಾಕ್ಟರೇಟ್ ನೀಡಿವೆ. ಆರೂ ಖಂಡಗಳಲ್ಲಿ ಪ್ರಸಿದ್ಧರಾಗಿದ್ದಾರೆ.

ಕನ್ನಡ ಮಾಧ್ಯಮದ ಪ್ರೌಢಶಾಲೆಯಲ್ಲಿ ಓದಿ ಅತ್ಯುನ್ನತ ಸಾಧನೆ ಮಾಡಿದವರ ಪೈಕಿ ಪ್ರಮುಖರು. ಭಾರತೀಯ ವಿಜ್ಞಾನ ಮಂದಿರವನ್ನು ಮುನ್ನಡೆಸಿ, ಜವಾಹರ್ ಲಾಲ್ ನೆಹರೂ ಉನ್ನತ ವೈಜ್ಞಾನಿಕ ಸಂಶೋಧನ ಕೇಂದ್ರವನ್ನು ಹುಟ್ಟುಹಾಕಿ, ಅದನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದ್ದಾರೆ. ಕರ್ನಾಟಕ ಸರ್ಕಾರ `ಕರ್ನಾಟಕ ರತ್ನ’ ಪ್ರಶಸ್ತಿಯನ್ನು, ಭಾರತ ಸರ್ಕಾರ `ಭಾರತ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವ ತೋರಿಸಿವೆ. ಇಂಥ ಅಸಾಧಾರಣ ಸಾಧಕರ ಬದುಕು, ಸಾಧನೆ ಕುರಿತು ಅಪೂರ್ವ ಒಳನೋಟಗಳು ಈ ಕೃತಿಯಲ್ಲಿವೆ. ಹಿರಿಯರು, ಕಿರಿಯರು ಎನ್ನದೆ ಎಲ್ಲರೂ ಓದಿ ಸ್ಫೂರ್ತಿ ಪಡೆಯಬಹುದಾದ ಕೃತಿ. 

About the Author

ಟಿ. ಆರ್. ಅನಂತರಾಮು
(03 August 1949)

ಭೂ ವಿಜ್ಞಾನಿ, ಸಂಶೋಧಕ, ಅಂಕಣಕಾರ, ವಿಜ್ಞಾನ ಲೇಖಕ ಟಿ.ಆರ್. ಅನಂತರಾಮು ಅವರು ಜನಿಸಿದ್ದು 1949 ಆಗಸ್ಟ್ 3ರಂದು ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ತಾಳಗುಂದದಲ್ಲಿ.ತಾಳಗುಂದ ರಾಮಣ್ಣ ಅನಂತರಾಮು ಅವರ ಪೂರ್ಣ ಹೆಸರು. ಸಿರಾದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಮಾಧ್ಯಮಿಕ ಶಿಕ್ಷಣ ಪೂರ್ಣಗೊಳಿಸಿದ ಅವರು ಸಿರಾದ ಮುನಿಸಿಪಲ್ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದ್ದಾರೆ. ಆನಂತರ ತುಮಕೂರಿನ ಸರ್ಕಾರಿ ಕಾಲೇಜಿನಲ್ಲಿ ಪದವಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎನ್ಸಿ(ಜಿಯಾಲಜಿ) ಪದವಿ ಪಡೆದಿದ್ದಾರೆ.  ಭೂ ವಿಜ್ಞಾನ ವಿಷಯದಲ್ಲಿ ಪದವಿ ಪಡೆದ ನಂತನ ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ರಾಜ್ಯದ ನಾನಾ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದ್ದಾರೆ.  ...

READ MORE

Related Books