ಭಾರತ ಸಂವಿಧಾನ (ಪುಟಾಣಿ ಆವೃತ್ತಿ)

Author : ಎಂ. ಅಬ್ದುಲ್ ರೆಹಮಾನ್ ಪಾಷಾ

Pages 48

₹ 23.00




Year of Publication: 2021
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿಔಆನಂದ ವೃತ್ತ, ಕುಮಾರಪಾರ್ಕ್ ಪೂರ್ವ ಬೆಂಗಳೂರು-560009
Phone: 08022161900

Synopsys

ಲೇಖಕ ಡಾ. ಎಂ. ಅಬ್ದುಲ್ ರೆಹಮಾನ ಪಾಷಾ ಅವರು ಮಕ್ಕಳಿಗಾಗಿ ಬರೆದ ಕೃತಿ-ಭಾರತ ಸಂವಿಧಾನ. ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಭಾರತ ಸಂವಿಧಾನದ ಸ್ವರೂಪ, ಮಹತ್ವವನ್ನು, ಆಶಯಗಳನ್ನು ಅತ್ಯಂತ ಸರಳವಾಗಿ ಮಕ್ಕಳಿಗೆ ತಿಳಿಯುವ ಹಾಗೆ ವಿವರಿಸಲಾಗಿದೆ. ವ್ಯಕ್ತಿಯ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳು, ಅಭಿಪ್ರಾಯ ಸ್ವಾತಂತ್ಯ್ರ, ಧಾರ್ಮಿಕ ಸ್ವಾತಂತ್ಯ್ರ, ಶೈಕ್ಷಣಿಕ ಹಕ್ಕುಗಳು ಹೀಗೆ ಮೂಲ ತತ್ವಗಳನ್ನು ಸಹ ವಿವರಿಸಲಾಗಿದೆ.

About the Author

ಎಂ. ಅಬ್ದುಲ್ ರೆಹಮಾನ್ ಪಾಷಾ

ಸಿನಿಮಾ, ಮಾಧ್ಯಮ ಮತ್ತು ವಿಜ್ಞಾನಗಳಿಗೆ ಸಂಬಂಧಿಸಿದಂತೆ  ಬರೆಯುವ ಅಬ್ದುಲ್ ರೆಹಮಾನ್ ಪಾಷಾ ಕನ್ನಡ ಲೇಖಕರು. ಗಾಂಧೀ ನೆಹರೂ ಆಯ್ದ ಪತ್ರಗಳು, ಅಭಿವೃದ್ಧಿ ಸಂವಹನ ಕೌಶಲ್ಯಗಳು, ಸರ್ವಾಂಗೀಣ ಬೆಳವಣಿಗೆಗಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋವೃತ್ತಿ ಪೋಷಕರ ಜವಾಬ್ದಾರಿ, ವೈಜ್ಞಾನಿಕ ಮನೋವೃತ್ತಿ ಮಕ್ಕಳ ಹಕ್ಕು, ಶಿಕ್ಷಕರ ಹೊಣೆ, ನಿಮ್ಮ ಉಚ್ಚಾರಣೆ, ಧ್ವನಿಯನ್ನು ಸುಧಾರಿಸಿಕೊಳ್ಳಿ, ವೈಜ್ಞಾನಿಕ ಮನೋವೃತ್ತಿ ಬೆಳೆಸಿಕೊಳ್ಳುವ ಬಗೆ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ವಿಶ್ವಮಾನ್ಯರು ಜೀವನ ಚರಿತ್ರೆ ಮಾಲೆಯಲ್ಲಿ ಮಹಾತ್ಮ ಗಾಂಧಿ, ಟೀಪು ಸುಲ್ತಾನ, ಜವಾಹರಲಾಲ್ ನೆಹರೂ, ಪ್ರವಾದಿ ಮುಹಮ್ಮದ್ ಕಿರುಹೊತ್ತಿಗೆಗಳು ಮುದ್ರಣ ಕಂಡಿವೆ. ನಂಬಿಕೆ ಮೂಢನಂಬಿಕೆ ವೈಜ್ಞಾನಿಕ ಮನೋವೃತ್ತಿ’ ಕೃತಿಗೆ ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್‌ನ ‘ಕಾವ್ಯನಂದ’ ಪ್ರಶಸ್ತಿ (2015), ಶಿವಮೊಗ್ಗದ ...

READ MORE

Related Books