ಭಾರತದ ಸಂದೇಶ ಮತ್ತು ಗುರಿ

Author : ಮನು (ಪೆನುಗೊಂಡೆ ನರಸಿಂಹರಂಗನ್‌)

Pages 94

₹ 10.00




Year of Publication: 2013
Published by: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ. ಮಲ್ಲತ್ತಹಳ್ಳಿ, ಬೆಂಗಳೂರು

Synopsys

ಭಾರತೀಯ ಸಂಸ್ಕೃತಿಯ ಮೂಲಭೂತ ತತ್ತ್ವಗಳನ್ನು ಈ ಸಂಕಲನದಲ್ಲಿ  ಅರವಿಂದರ ನೀಡಿದ್ದಾರೆ. ಅಧ್ಯಾತ್ಮವು ಹೇಗೆ ಜೀವನದ ಮೂಲ ಉದ್ದೇಶವಾಗಿರಬೇಕು ಎನ್ನುವುದನ್ನು ಇಲ್ಲಿ ವಿವರಿಸಿದ್ದಾರೆ. ಭಾರತೀಯ ನಾಗರಿಕತೆಯ ಬಹುಮುಖೀ ಶ್ರೇಷ್ಠತೆ ಹಾಗೂ ಅದರ ಹಿಂದಿರುವ ಆಧ್ಯಾತ್ಮಿಕ ತತ್ತ್ವಶಾಸ್ತ್ರ ಮತ್ತು ವಿಜ್ಞಾನ, ಅಲ್ಲಿ ಬರುವ ನಾಲ್ಕು ವರ್ಣಗಳು, ನಾಲ್ಕು ಆಶ್ರಮಗಳು, ಸತ್ಯಾ ಅನ್ವೇಷಣೆಯ ಮಾರ್ಗಗಳು, ಭಾರತೀಯ ಕಲೆ ಇವೆಲ್ಲವುಗಳ ಬಗೆಗೂ ಚರ್ಚೆಮಾಡಿ ನಂತರ ಭಾರತೀಯ ಆತ್ಮ ಹಾಗೂ ಅದರ ಶಕ್ತಿಯ ಪುನಶ್ಚೇತನವನ್ನು ಕುರಿತು ವಿವರಗಳನ್ನು ಲೇಖಕರು ಈ ಕೃತಿಯಲ್ಲಿ ಒದಗಿಸಿದ್ದಾರೆ.

About the Author

ಮನು (ಪೆನುಗೊಂಡೆ ನರಸಿಂಹರಂಗನ್‌)
(27 July 1946 - 08 November 2011)

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಯಲ್ಲಿ 1946 ರ ಜುಲೈ 27 ರಂದು  ಮನು (ಪೆನುಗೊಂಡೆ ನರಸಿಂಹರಂಗನ್‌) ಜನಿಸಿದರು. ತಂದೆ ಪೆನುಗೊಂಡೆ ದೇಶಿಕಾಚಾರ್ಯರು, ತಾಯಿ ರಂಗನಾಯಕಮ್ಮ. ಮೆಕ್ಯಾನಿಕಲ್‌ ಎಂಜಿನಿಯರರು. ಧಾರವಾಡದ ಕರ್ನಾಟಕ ವಿ.ವಿ.ಯಿಂದ ಬಾಹ್ಯ ವಿದ್ಯಾರ್ಥಿಯಾಗಿ  ಎಂ.ಎ. ಪದವೀಧರರು. ಮೈಸೂರು ವಿಶ್ವವಿದ್ಯಾಲಯದಿಂದ ಎಪಿಗ್ರಫಿ ಡಿಪ್ಲೊಮ ಮತ್ತು ತಮಿಳುನಾಡಿನ ಅಣ್ಣಾಮಲೈ ವಿಶ್ವವಿದ್ಯಾಲಯದಿಂದ ಪಡೆದ ಎಂ.ಎ. (ಮನಃಶಾಸ್ತ್ರ) ಪದವೀಧರರು. ಮೈಸೂರಿನ ಪ್ಲಾಸ್ಟಿಕ್‌ ಕಾರ್ಖಾನೆಯಲ್ಲಿ. ನಂತರ ಕೆ.ಜಿ.ಎಫ್‌.ನ ಭಾರತ್‌ ಅರ್ಥ್‌‌ಮೂವರ್ಸ್‌ನಲ್ಲಿ ಸಂಶೋಧನಾ ಎಂಜಿನಿಯರಾಗಿ, ಚೆನ್ನೈನ ಬ್ರೇಕ್ಸ್‌ ಇಂಡಿಯಾ ಲಿಮಿಟೆಡ್‌ನಲ್ಲಿ ಪ್ರೊಡಕ್ಷನ್‌ ಎಂಜನಿಯರಾಗಿ,  ಪುಣೆಯ ಆಟೋಮೊಬೈಲ್‌ ರಿಸರ್ಚ್ ಅಸೋಸಿಯೇಷನ್‌ ಆಫ್‌ ಇಂಡಿಯಾದಲ್ಲಿ ಡೆಪ್ಯುಟಿ ಡೈರೆಕ್ಟರ್ , ...

READ MORE

Related Books