ಭಾರತದ ಸ್ವಾತಂತ್ಯ್ರ ಸಂಗ್ರಾಮ

Author : ಎಲ್.ಎಸ್. ಶೇಷಗಿರಿರಾವ್

Pages 185

₹ 160.00




Year of Publication: 2021
Published by: ಸಪ್ನ ಬುಕ್ ಹೌಸ್
Address: # 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು

Synopsys

ಹಿರಿಯ ಲೇಖಕ ಪ್ರೊ. ಎಲ್.ಎಸ್. ಶೇಷಗಿರಿರಾವ್ ಅವರು ತಮ್ಮ ಪ್ರಧಾನ ಸಂಪಾದಕತ್ವದಲ್ಲಿ ರಚಿಸಿದ ಕೃತಿ. ಭಾರತವನ್ನು ಬ್ರಿಟಿಷರಿಂದ ಬಿಡುಗಡೆಗೊಳಿಸಲು ನಡೆದ ಪ್ರತಿ ಹೋರಾಟಗಳ ಹಾಗೂ ಆ ಹೋರಾಟಗಳ ನಾಯಕತ್ವದ ಮುಂಚೂಣಿಯಲ್ಲಿರುವವರನ್ಣೂ ದಾಖಲಿಸುವ ಅಗತ್ಯ ಐತಿಹಾಸಿಕ ಅಧ್ಯಯನದ ದೃಷ್ಟಿಯಿಂದ ಅತಿ ಮಹತ್ವ. ಈ ಹಿನ್ನೆಲೆಯಲ್ಲಿ, ಅವರು ವಿವಿಧ ಲೇಖಕರು ಬರೆದ ಬರಹಗಳನ್ನು ಸಂಪಾದಿಸಿದ್ದ ವಿಶೇಷತೆ ಈ ಕೃತಿಯದ್ದು. ಮಹಾತ್ಮಾಗಾಂಧಿ, ನೆಹರೂ, ವಲ್ಲಭಭಾಯಿ ಪಟೇಲ್ ಸೇರಿದಂತೆ ಇತರೆ ನಾಯಕರ ಹೋರಾಟದ ಕೊಡುಗೆಗಳನ್ನು, ವೈಖರಿಗಳನ್ನು ದಾಖಲಿಸಿದ ಕೃತಿ ಇದು.

About the Author

ಎಲ್.ಎಸ್. ಶೇಷಗಿರಿರಾವ್
(16 February 1925 - 20 December 2019)

ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ...

READ MORE

Related Books