ಭಾರತೀಯ ಕಾವ್ಯ ಮೀಮಾಂಸೆ

Author : ಟಿ.ಎಸ್. ಗೋಪಾಲ್

Pages 80

₹ 50.00




Published by: ನವಕರ್ನಾಟಕ ಪಬ್ಲಿಕೇಷನ್ಸ್‌
Address: ಬನ್ನೇರಘಟ್ಟ ರಸ್ತೆ, ಬೆಂಗಳೂರು- 560076
Phone: 080 22161900

Synopsys

ಲೇಖಕ ಟಿ. ಎಸ್. ಗೋಪಾಲ್‌ ಅವರು ಬರೆದಿರುವ ಕೃತಿ ʼಭಾರತೀಯ ಕಾವ್ಯ ಮೀಮಾಂಸೆʼ. ಪುಸ್ತಕದ ಬಗ್ಗೆ ಲೇಖಕರೇ ಹೇಳುವಂತೆ, ಇದು ಕನ್ನಡ ಕಲಿಕೆಯ ಪುಸ್ತಕವಾಗಿದೆ. ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು, ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು.

About the Author

ಟಿ.ಎಸ್. ಗೋಪಾಲ್

ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...

READ MORE

Related Books