ಭಾರತೀಯ ಮಹಿಳೆಯರ ಸ್ವಾತಂತ್ರ್ಯ ಹೋರಾಟ

Author : ವೈದೇಹಿ (ಜಾನಕಿ ಶ್ರೀನಿವಾಸಮೂರ್ತಿ)

Pages 88

₹ 50.00




Year of Publication: 2014
Published by: ಅಭಿನವ ಪ್ರಕಾಶನ
Address: 17/18-2, ಮೊದಲನೆಯ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
Phone: 9448804905

Synopsys

ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಕಮಲಾದೇವಿ ಚಟ್ಟೋಪಾಧ್ಯಾಯ ಅವರಿಗೆ ಭಾರತದ ಸಾಧಕಿಯರಲ್ಲಿಯೇ ಎತ್ತರದ ಸ್ಥಾನವಿದೆ. ಸ್ವಾತಂತ್ಯ್ರ ಹೋರಾಟ, ಸಮಾಜ ಸೇವೆ, ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ೨೦ನೇ ಶತಮಾನದ ಮಾದರಿ ಹೆಣ್ಣು ಎನಸಿಕೊಂಡವರು ಅವರು. ಸ್ವಾತಂತ್ಯ್ರ ಹೋರಾಟದ ಪ್ರವಾಹಕ್ಕೆ ಮಹಿಳಾ ಧಾರೆಯನ್ನು ಸೇರಿಸಿದ ಕಮಲಾದೇವಿ ಆ ಮೂಲಕ ಸಾಮಾಜಿಕ ಪ್ರಗತಿ ಸಾಧಿಸಲು ಮುಂದಾದರು. ’ರಾಷ್ಟ್ರೀಯ ನಾಟಕ ಶಾಲೆ’ಯಂತಹ ಸಂಸ್ಥೆಗಳನ್ನು ಸ್ಥಾಪಿಸುವಲ್ಲಿ, ಹಲವು ಕರಕುಶಲ ವಸ್ತುಸಂಗ್ರಹಾಲಯಗಳನ್ನು ರೂಪಿಸುವಲ್ಲಿ ಕಮಲಾದೇವಿ ಅವರ ಶ್ರಮ ಅಪಾರವಾದುದಾಗಿತ್ತು. 

ಅವರು ಭಾರತದ ಸ್ವಾತಂತ್ಯ್ರ ಸಂಗ್ರಾಮದಲ್ಲಿ ಮಹಿಳೆಯರು ಪಾಲ್ಗೊಂಡ ಬಗ್ಗೆ 1983ರಲ್ಲಿ ’Indian Women's Battle for Freedom’ ಕೃತಿ ರಚಿಸಿದ್ದರು. ಸೌತ್‌ ಏಷ್ಯಾ ಬುಕ್ಸ್‌ ಅದನ್ನು ಪ್ರಕಟಿಸಿತ್ತು.  ಕರ್ನಾಟಕದ ಕರಾವಳಿಯವರೇ ಆದ ಪ್ರಮುಖ ಲೇಖಕಿ ವೇದೇಹಿ ಅವರು”ಭಾರತೀಯ ಮಹಿಳೆಯರ ಸ್ವಾತಂತ್ರ್ಯ ಹೋರಾಟ’ ಹೆಸರಿನಲ್ಲಿ ಕೃತಿಯನ್ನು ಕನ್ನಡಕ್ಕೆ ತಂದಿದ್ದಾರೆ. 

About the Author

ವೈದೇಹಿ (ಜಾನಕಿ ಶ್ರೀನಿವಾಸಮೂರ್ತಿ)
(12 February 1945)

ಡಾ. ವೈದೇಹಿ ಅವರ ಮೂಲ ಹೆಸರು ಜಾನಕಿ ಶ್ರೀನಿವಾಸಮೂರ್ತಿ.  ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಜನಿಸಿದ ಅವರು ಕಾವ್ಯ, ಪ್ರಬಂಧ, ಮಕ್ಕಳ ಸಾಹಿತ್ಯ, ಜೀವನಚಿತ್ರ, ಕೃತಿ ಸಂಪಾದನೆ ಪ್ರಕಾರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮಾನವ ಸಹಜ ಸಂಬಂಧಗಳು ಮತ್ತು ಹೆಣ್ಣಿನ ಭಾವತರಂಗಗಳನ್ನು ಹಿಡಿದಿಡುವ ಕಥೆ-ಕಾದಂಬರಿ ರಚಿಸಿರುವ ಲೇಖಕಿ. ಮರಗಿಡಬಳ್ಳಿ ಅಂತರಂಗದ ಪುಟಗಳು ಸಮಾಜಶಾಸ್ತ್ರಜ್ಞೆಯ ಟಿಪ್ಪಣಿಗಳು, ಅಮ್ಮಚ್ಚಿ ಎಂಬ ನೆನಪು. ಕತೆ ಕತೆ ಕಾರಣ (ಕಥಾ ಸಂಕಲನಗಳು), ಅಲೆಗಳಲ್ಲಿ ತರಂಗ (ಸಮಗ್ರ ಕಥಾ ಸಂಕಲನ), ಬಿಂದು ಬಿಂದಿಗೆ, ಪಾರಿಜಾತ ಹೂವ ಕಟ್ಟುವ ಕಾಯಕ (ಕವನ ಸಂಕಲನ), ಅಸ್ಪೃಶ್ಯರು (ಕಾದಂಬರಿ), ಮಲ್ಲಿನಾಥನ ಧ್ಯಾನ, ಮೇಜು ಮತ್ತು ...

READ MORE

Related Books