ಭಾರತದ ಹಬ್ಬ ಹರಿದಿನಗಳು ಹಾಗೂ ದಿನಾಚರಣೆಗಳು

Author : ಸು. ರುದ್ರಮೂರ್ತಿ ಶಾಸ್ತ್ರಿ

Pages 226

₹ 180.00




Year of Publication: 2018
Published by: ಸನ್ನಿಧಿ ಪ್ರಕಾಶನ
Address: ಬೆಂಗಳೂರು

Synopsys

ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರು ಮಕ್ಕಳಿಗಾಗಿ ರಚಿಸಿದ ಕೃತಿ-ಭಾರತದ ಹಬ್ಬ ಹರಿದಿನಗಳು ಹಾಗೂ ದಿನಾಚರಣೆಗಳು. ಭಾರತವು ಅಸಂಖ್ಯ ಹಬ್ಬಗಳ ದೇಶ. ಗಣ್ಯ ಮಹನೀಯರನ್ನು ಸ್ಮರಿಸುವ ದೇಶ. ಮಕ್ಕಳ ಮನಸ್ಸು ಇಂತಹ ಉದಾತ್ತ ಸಂಸ್ಕೃತಿಯಲ್ಲಿ ರೂಪುಗೊಳ್ಳಲಿ ಎಂಬ ಸದುದ್ದೇಶದೊಂದಿಗೆ ಮಹನೀಯರ ಜಯಂತಿ-ಪುಣ್ಯತಿಥಿಗಳಂತಹ ದಿನಾಚರಣೆಗಳು ಹಾಗೂ ಸಾಂಪ್ರದಾಯಿಕ-ಪರಂಪರಾಗತ ಆಚರಣೆಗಳನ್ನು ಗೌರವಿಸುವ ಸಂಕೇತವಾಗಿ ಹಬ್ಬಗಳನ್ನು ಆಚರಿಸುವುದು ಭಾರತೀಯ ಪದ್ಧತಿಯಲ್ಲಿ ನಡೆದುಕೊಂಡು ಬಂದಿದೆ. ಆ ಮೂಲಕ ಸಾರ್ವಜನಿಕ ಹಾಗೂ ವ್ಯಕ್ತಿಗತ ಜೀವನವು ನೆಮ್ಮದಿಯಿಂದ ಕೂಡಿರಲಿ ಎಂಬ ಆಶಯ ಈ ಆಚರಣೆಯ ಹಿಂದಿದೆ. ಈ ಹಿನ್ನೆಲೆಯಲ್ಲಿ ಲೇಖಕರು, ಯುಗಾದಿ, ಗಣೇಶ ಚತುರ್ಥಿ, ನವರಾತ್ರಿ, ಸಂಕ್ರಮಣ ಮಾತ್ರವಲ್ಲ; ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮಗಾಂಧಿ, ಬಸವಣ್ಣ, ವಿಶ್ವೇಶ್ವರಯ್ಯ ಹೀಗೆ ದೇಶಭಕ್ತರ, ವಿದ್ವಾಂಸರ, ಚಿಂತಕರ ಜಯಂತಿ-ಪುಣ್ಯತಿಥಿಗಳನ್ನು ಆಚರಿಸುವ ಅಗತ್ಯ ಹಾಗೂ ಮಹತ್ವವನ್ನು ಮಕ್ಕಳಿಗೆ ತಿಳಿಸುವ ಕೃತಿ ಇದು.

About the Author

ಸು. ರುದ್ರಮೂರ್ತಿ ಶಾಸ್ತ್ರಿ
(11 November 1948)

ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...

READ MORE

Related Books