ಭಾರತೀಪುರ

Author : ಯು.ಆರ್. ಅನಂತಮೂರ್ತಿ

Pages 204

₹ 165.00




Year of Publication: 2017
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

‘ಭಾರತೀಪುರ’, ಸೃಷ್ಟ್ಯಾತ್ಮಕ ಬರಹಗಾರನೊಬ್ಬ ಕಂಡ ಆಳವಾದ ಒಂದು ವಿರಸದ ಸಮಗ್ರ ಪರಿಚಯದ ಅಸಲುಚಿತ್ರ. ಮೌಲ್ಯಗಳ, ಕಟ್ಟಡಗಳ, ವ್ಯಕ್ತಿಗಳ ನಡುವಣ ಈ ವಿರಸಕ್ಕೆ ಸಾಹಿತ್ಯಕವಾದದ್ದೇ ಅಲ್ಲದೆ, ಬಹುಬಾರಿ ಸಮಾಜಶಾಸ್ತ್ರದ್ದು ಹಾಗೂ ಒಮ್ಮೊಮ್ಮೆ ದಾರ್ಶನಿಕವಾದದ್ದು ಆದ ಆಯಾಮವೂ ಉಂಟು. ವಸ್ತುಸ್ಥಿತಿಯ ಮಟ್ಟದಲ್ಲಿ, ಕಾನಂಬರಿಯ ಮುಖ್ಯ ಗೊಡವೆ ಸಂಪ್ರದಾಯಬದ್ಧ ಸಮಾಜದ ಆಧುನೀಕರಣ; ಆ ಸಮಾಜದ ಮೂರ್ತ-ಅಮೂರ್ತ ಸಂಕೇತಗಳನ್ನು ತೊಡೆದುಹಾಕುವುದು; ಕನಿಷ್ಠ ಅವುಗಳನ್ನು ಅಪಮೌಲ್ಯಗೊಳಿಸುವುದು, ಹೊಸ ವಸ್ತುಸ್ಥಿತಯನ್ನು, ಮೌಲ್ಯಗಳನ್ನು ನಿರ್ಮಿಸುವುದು. ವ್ಯಕ್ತಿಯ ಮಟ್ಟದಲ್ಲಿ ಅದರ ಮುಖ್ಯ ಗೊಡವೆ ಬ್ರಾಹ್ಮಣ ಜಮೀನ್ದಾರನ ಕುಟುಂಬದಲ್ಲಿ ಹುಟ್ಟಿದ ಧೀಮಂತನೊಬ್ಬ ತನ್ನ ಜಾತಿ ಹಾಗೂ ವರ್ಗಗಳಿಂದ ಮುಕ್ತನಾಗಿ ತನ್ನ ವರ್ಗ-ಜಾತಿಯ ಶೋಷಣೆಗೆ ಗುರಿಯಾಗಿದ್ದ ದಲಿತರ ಜೊತೆಗೆ ಏಕೀಭಾವ ಸಾಧಿಸುವುದರ ಸಂಕಟ. ಇವೆಲ್ಲನ್ನು ಕಟ್ಟಿಕೊಟ್ಟಿರುವ ಕಾದಂಬರಿ ಮುಗಿಯುವುದು ಹೇಗೆ, ಬರಹಗಾರ ಕಾದಂಬರಿಯನ್ನು ಹೇಗೆ ಅಂತ್ಯಗೊಳಿಸಿದ್ದಾನೆ ಅನ್ನುವುದನ್ನು ತಿಳಿಯಲು ಓದಿ ಭಾರತೀಪುರ.

About the Author

ಯು.ಆರ್. ಅನಂತಮೂರ್ತಿ
(21 December 1932 - 22 August 2014)

ಕಥೆ-ಕಾದಂಬರಿ ಮತ್ತು ವೈಚಾರಿಕ ಚಿಂತನೆಗಳ ಮೂಲಕ ಕನ್ನಡ- ಭಾರತದ ಸಾಹಿತ್ಯ-ಸಾಂಸ್ಕೃತಿಕ ಚಿಂತನೆಯನ್ನು ಶ್ರೀಮಂತಗೊಳಿಸಿದವರು ಯು.ಆರ್. ಅನಂತಮೂರ್ತಿ. ತಂದೆ ಉಡುಪಿ ರಾಜಗೋಪಾಲಾಚಾರ್ಯ ತಾಯಿ ಸತ್ಯಮ್ಮ. ತೀರ್ಥಹಳ್ಳಿಯ ಮೇಳಿಗೆಯಲ್ಲಿ 1932ರ ಡಿಸೆಂಬರ್ 21 ಜನಿಸಿದರು. ದೂರ್ವಾಸಪುರದಲ್ಲಿ ಸಾಂಪ್ರದಾಯಿಕ ಪದ್ಧತಿಯಲ್ಲಿ ಸಂಸ್ಕೃತ ಕಲಿತು ಶಾಲಾ ಶಿಕ್ಷಣವನ್ನು ತೀರ್ಥಹಳ್ಳಿಯಲ್ಲಿ ಪಡೆದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು. ಬರ್ಮಿಂಗ್ ಹ್ಯಾಂ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ (1966) ಪದವಿ ಪಡೆದರು. ಹಾಸನದ ಕಾಲೇಜಿನಲ್ಲಿ ಅಧ್ಯಾಪಕ (1956) ರಾದ ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಂತರ ಕೇರಳದ ಮಹಾತ್ಮಗಾಂಧಿ ವಿಶ್ವವಿದ್ಯಾಲಯದ ಕುಲಪತಿ (1987-91) ಗಳಾಗಿ ...

READ MORE

Related Books