ಲಕ್ಷ್ಮಣ ಬಾದಾಮಿ ಅವರ ಮೊದಲ ಕಥಾ ಸಂಕಲನ-ಭವ. 10 ಕಥೆಗಳನ್ನು ಒಳಗೊಂಡಿದೆ. ಕಥೆಯ ನಿರೂಪಣೆ, ಭಾಷೆಯ ಬಳಕೆ, ಶೈಲಿ ಇಲ್ಲಿಯ ಕಥೆಗಳ ಪ್ರಮುಖ ಅಂಶಗಳಾಗಿದ್ದು, ಪ್ರತಿ ಕಥೆಯು ತುಂಬಾ ಲವಲವಿಕೆಯಿಂದ ಕೂಡಿದ್ದು, ಓದುಗರನ್ನು ಸೆಳೆಯುತ್ತದೆ. ಬದುಕನ್ನು ಬಹು ಸೂಕ್ಷ್ಮವಾಗಿ ಪರಿಶೀಲಿಸಿ ನೋಡುವ ಬಹುತೇಕ ಕಥನಗಳು, ತಮ್ಮ ವಸ್ತು ವೈವಿಧ್ಯತೆಯಿಂದ ವಿಶೆಷ್ಟವೆನಿಸುತ್ತವೆ. ಲೇಖಕರಿಗೆ ಕಥನ ಕಲೆ ಸಿದ್ಧಿಸಿದೆ.
ಲಕ್ಷ್ಮಣ ಬಾದಾಮಿ ಬಾಗಲಕೋಟೆ ಜಿಲ್ಲೆಯ ಸಿರೂರ ಅವರ ಸ್ವಂತ ಊರು. ವೃತ್ತಿಯಿಂದ ಚಿತ್ರಕಲಾ ಶಿಕ್ಷಕರು. ‘ಭವ’, ‘ಬೇರು ಮತ್ತು ಬೆವರು’, ‘ಒಂದು ಚಿಟಿಕೆ ಮಣ್ಣು’ ಅವರ ಕಥಾಸಂಕಲನಗಳು. ‘ಮನುಷ್ಯರು ಬೇಕಾಗಿದ್ದಾರೆ’ ಅವರ ಪ್ರಕಟಿತ ಕವನ ಸಂಕಲನ. ‘ರೂಪ ನಿರೂಪ’ ಪೇಂಟಿಂಗ್ಸ್ ಗಳ ಕುರಿತ ಕೃತಿಯಾಗಿದೆ. ‘ಬಿಸಿಲ ಸೀಮೆಯ ಜಾನಪದ ಸಿರಿ’ ಅವರ ಸಂಪಾದಿತ ಕೃತಿ. ಅವರ ‘ಬೇರು ಮತ್ತು ಬೆವರು’ ಕೃತಿಗೆ ಬೇಂದ್ರೆ ಗ್ರಂಥ ಬಹುಮಾನ, ‘ಒಂದು ಚಿಟಿಕೆ ಮಣ್ಣು’ ಕಥೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಚಿನ್ನದ ಪದಕ ದೊರೆತಿದ್ದು ಇದೇ ಶೀರ್ಷಿಕೆಯ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2019ನೇ ಸಾಲಿನ ಅತ್ಯುತ್ತಮ ಕೃತಿ ಬಹುಮಾನ ದೊರೆತಿದೆ. ...
READ MORE