ಭಾವದ ಅಂಬಾರಿ

Author : ಎ.ಎನ್.ರಮೇಶ್. ಗುಬ್ಬಿ

Pages 112

₹ 100.00




Year of Publication: 2015
Published by: ಗೋಮಿನಿ ಪ್ರಕಾಶನ
Address: ಶ್ರೀವೀರಭದ್ರಸ್ವಾಮಿ ನಿಲಯ, ಒಂದನೇ ಮುಖ್ಯರಸ್ತೆ, ಐದನೇ ಅಡ್ಡ ರಸ್ತೆ, ವಿಶ್ವಣ್ಣ ಲೇಔಟ್, ಶಾಂತಿನಗರ, ತುಮಕೂರು- 572105
Phone: 9986692342

Synopsys

‘ಭಾವದ ಅಂಬಾರಿ’ ಲೇಖಕ ಎ.ಎನ್. ರಮೇಶ್ ಗುಬ್ಬಿ ಅವರ ಕಥಾಸಂಕಲನ. ಈ ಕೃತಿಗೆ ಡಾ.ಪ್ರಧಾನ್ ಗುರುದತ್ತ ಅವರ ಮುನ್ನುಡಿಯಿದೆ. ಕೃತಿಯ ಕುರಿತು ಬರೆಯುತ್ತಾ ಈಗ್ಗೆ ಎರಡು ವರ್ಷಗಳ ಹಿಂದೆ ಕಾಸರಗೋಡಿನ ಎಡನೀರು ಮಠದ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿಯ ಸಮಾರಂಭದಲ್ಲಿ ರಮೇಶ್ ಗುಬ್ಬಿ ಅವರ ಚುಟುಕು ಕವನ ಸಂಕಲನವನ್ನು ಬಿಡುಗಡೆ ಮಾಡುವ ಅವಕಾಶ ನನಗೆ ದೊರೆತಿತ್ತು. ಅವರ ಭಾವ ಸಂವೇದನೆ, ಸಾಮಾಜಿಕ ವಿಷಯ ಸ್ಪಂದನ ಹಾಗೂ ಸಹಜ ಕವಿತತ್ವದ ಬಗ್ಗೆ ನನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದೆ. ಈಗಾಗಲೇ ರಂಗಭೂಮಿ ಕ್ಷೇತ್ರದಲ್ಲೂ ಸಾಕಷ್ಟು ಕೃಷಿ ಮಾಡಿರುವ, ನಾಟಕ ರಚನೆ, ಅಭಿನಯ, ನಿರ್ದೇಶನಗಳಲ್ಲಿ ಹೆಸರು ಮಾಡಿರುವ ರಮೇಶ್ ಗುಬ್ಬಿ ಅವರು, ಸಾಹಿತ್ಯದ ಇನ್ನೊಂದು ಪ್ರಕಾರವಾದ ಸಣ್ಣ ಕಥೆಗಳ ರಚನೆಯಲ್ಲೂ ತಮ್ಮ ಪ್ರತಿಭೆಯನ್ನು ಹರಿಯಬಿಡುತ್ತಾ ಇದ್ದಾರೆ ಎಂಬುದು ನನಗೆ ಹೆಚ್ಚಿನ ಸಂತೋಷವನ್ನು ತಂದಿದೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ.

About the Author

ಎ.ಎನ್.ರಮೇಶ್. ಗುಬ್ಬಿ

ಲೇಖಕ ಎ.ಎನ್.ರಮೇಶ್ ಗುಬ್ಬಿ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ವೃತ್ತಿಯಲ್ಲಿ ಕಾರವಾರ ಬಳಿಯ ಕೈಗಾದಲ್ಲಿರುವ ಭಾರತೀಯ ಅಣುಶಕ್ತಿ ನಿಗಮದ ಉದ್ಯೋಗಿ. ಪ್ರವೃತ್ತಿಯಲ್ಲಿ ಸಾಹಿತಿ. ಕವನ, ಚುಟುಕು, ಕಥೆ, ನಾಟಕ, ಚಿತ್ರಕಥೆ ರಚನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ‘ಗುಬ್ಬಿಯ ಕಲರವ’, ‘ಚುಟುಕು-ಚಿತ್ತಾರ’, ‘ಎಡನೀರೊಡನೆಯನಿಗೆ ಚುಟುಕು ಪುಷ್ರ್ಪಾಚನೆ’, ‘ಕೇಶವನಾಮ ಚೈತನ್ಯಧಾಮ’ ಎಂಬ ಚುಟುಕು ಸಂಕಲನಗಳು, ‘ಹನಿ-ಹನಿ’ ಎಂಬ ಹನಿಗವನ ಸಂಕಲನ, ‘ಭಾವದಂಬಾರಿ’ ಕಥಾಸಂಕಲನ, ‘ಶಕ್ತಿ ಮತ್ತು ಅಂತ’ ಅವಳಿ ನಾಟಕ ಸಂಕಲನ, ‘ಕಿಸ್ ಮಾತ್ರೆ’ ಎನ್ನುವ ಹಾಸ್ಯಗವನ ಸಂಕಲನ, ‘ಹೂವಾಡಿಗ’, ‘ಕಾಡುವ ಕವಿತೆಗಳು’ ಕವನ ಸಂಕಲನಗಳು ಪ್ರಕಟವಾಗಿದೆ. ಕಾಸರಗೋಡಿನ ಎಡನೀರಿನಲ್ಲಿ ನಡೆದ ಪ್ರಪ್ರಥಮ ಅಂತರರಾಜ್ಯ ಚುಟುಕು ಸಮ್ಮೇಳನದಲ್ಲಿ ‘ಚುಟುಕು ಭಾರ್ಗವ’ ...

READ MORE

Related Books