ಭಾವರತ್ನಾಭರಣ ಸ್ತೋತ್ರ

Author : ಎಂ.ಎಂ. ಕಲಬುರ್ಗಿ

Pages 85

₹ 4.00




Year of Publication: 1979
Published by: ವೀರಶೈವ ಅಧ್ಯಯನ ಸಂಸ್ಥೆ
Address: ವೀರಶೈವ ಅಧ್ಯಯನ ಸಂಸ್ಥೆ, ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠ, ಡಂಬಳ- ಗದಗ.

Synopsys

ತೋಂಟದ ಸಿದ್ದೇಶ್ವರನ ಭಾವರತ್ನಾಭರಣ ಸ್ತೋತ್ರವು ಸಿದ್ದ ನಂಜೇಶನ ಕೃತಿ. ಈ ಕೃತಿ ದೊರೆಯುವ ಮೊದಲು ತೋಂಟದ ಸಿದ್ದೇಶ್ವರನ ಕಾಲ ಯಾವುದೆಂದು ನಿರ್ಧರಿಸುವುದು ಕಷ್ಟವಾಗಿತ್ತು. ಅಲ್ಲದೆ ಸಿದ್ದೇಶ್ವರನ ಕುರಿತ ದಟ್ಟ ವಿವರಗಳೂ ಲಭ್ಯ ಇರಲಿಲ್ಲ. ಲಿಂಗಾಯತ ಸಾಹಿತ್ಯವನ್ನು ಅಧ್ಯಯನ ಮಾಡಲು ಬಯಸುವವರಿಗೆ ಇದು ಮುಖ್ಯ ಆಕರ ಗ್ರಂಥ. ಎಂ.ಎಂ. ಕಲಬುರ್ಗಿ ಗ್ರಂಥವನ್ನು ಸಂಪಾದಿಸಿದ್ದಾರೆ.

About the Author

ಎಂ.ಎಂ. ಕಲಬುರ್ಗಿ
(28 November 1938 - 30 August 2015)

ಕರ್ನಾಟಕದಲ್ಲಿ ಸಂಶೋಧನಾ ಕ್ಷೇತ್ರದ ಪ್ರಮುಖ ಹೆಸರು ಎಂ.ಎಂ. ಕಲಬುರ್ಗಿ. ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ಲ ಗ್ರಾಮದಲ್ಲಿ 1938ರ ನವೆಂಬರ್ 28ರಂದು ಜನಿಸಿದರು. ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ಕಲಬುರ್ಗಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ (1960) ಮತ್ತು  ಎಂ.ಎ (1962) ಪದವಿ ಪಡೆದ ಅವರು ಸಲ್ಲಿಸಿದ ‘ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ’ (1968) ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಸಂದಿತ್ತು. ಕರ್ನಾಟಕ ಕಾಲೇಜಿನಲ್ಲಿ ...

READ MORE

Related Books