ಭೂಗರ್ಭಯಾತ್ರೆ

Author : ಎಂ. ಗೋಪಾಲಕೃಷ್ಣ ಅಡಿಗ

Pages 250

₹ 50.00




Year of Publication: 2007
Published by: ಕರ್ನಾಟಕ ಅನುವಾದ ಸಾಹಿತ್ಯ ಅಕಾಡೆಮಿ
Address: ಬೆಂಗಳೂರು

Synopsys

ಜೂಲ್ಸ್ ವೆರ್ನ್, ಫ್ರೆಂಚ್ ಭಾಷೆಯಲ್ಲಿ ವೈಜ್ಞಾನಿಕ ಲೇಖನಗಳನ್ನು ಬರೆಯುವವರಲ್ಲಿ ಪ್ರಮುಖರು. ಇವರ ’ಎ ಜರ್ನಿ ಟು ದ ಸೆಂಟರ್ ಆಫ್ ದ ಅರ್ತ” ಎಂಬ ರೋಚಕವಾದ ಕೃತಿಯ ಸಂಗ್ರಹಾನುವಾಗಿದೆ ಈ ಕೃತಿ. ಇದನ್ನು ಎಂ. ಗೋಪಾಲಕೃಷ್ಣ ಅಡಿಗರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.

ಕತೆಯಲ್ಲಿ ವಿಜ್ಞಾನಿಯೊಬ್ಬ ತನಗೆ ಸಿಕ್ಕಿದ ಒಂದು ಸಣ್ಣ ಸೂಚನೆಯ ಮೇರೆಗೆ ಭೂಗರ್ಭದತ್ತ ಯಾತ್ರೆಮಾಡಲು ಜೊತೆಗಾರರೊಡನೆ ಹೊರಡುತ್ತಾನೆ. ಎಲ್ಲಾ ಕಷ್ಟಗಳನ್ನೂ ಸಹಿಸಿಕೊಂಡು ಅಗ್ನಿಪರ್ವತದ ಗುಂಡಿಯೊಳಕ್ಕೆ ಇಳಿದು ಅವರೆಲ್ಲರೂ ಹೋಗುತ್ತಾರೆ. ಆದರೂ ಅವರು ನೈಸರ್ಗಿಕ ಕಾರಣಗಳಿಂದಾಗಿ ಭೂ ಗರ್ಭವನ್ನು ತಲುಪಲು ಸಾಧ್ಯವಾಗದೆ  ಊರಿಗೆ ಹಿಂತಿರುಗುತ್ತಾರೆ. ಹಿಂದಕ್ಕೆ ಬಂದ ವಿಜ್ಞಾನಿ ಅತಿಯಾದ ಕೀರ್ತಿಯನ್ನು ಗಳಿಸುತ್ತಾನೆ. ಈ ಸಂಗತಿಗಳ ಕುರಿತು ಲೇಖಕರು ವಿವರವಾದ ಮಾಹಿತಿಯನ್ನು ಈ ಕೃತಿಯಲ್ಲಿ ನೀಡಿದ್ದಾರೆ.

About the Author

ಎಂ. ಗೋಪಾಲಕೃಷ್ಣ ಅಡಿಗ
(18 February 1918 - 14 November 1992)

ಕನ್ನಡದಲ್ಲಿ ನವ್ಯಕಾವ್ಯಕ್ಕೆ ನಾಂದಿ ಹಾಡಿದ ಮೊಗೇರಿ ಗೋಪಾಲಕೃಷ್ಣ ಅಡಿಗ ಅವರನ್ನು ‘ಒಂದು ಜನಾಂಗದ ಕಣ್ಣು ತೆರೆಸಿದ ಕವಿ’ ಎಂದು ಗುರುತಿಸಲಾಗುತ್ತಿತ್ತು. ಅಡಿಗರು 1918ರ ಫೆಬ್ರುವರಿ 18ರಂದು ಜನಿಸಿದರು. ತಂದೆ ರಾಮಪ್ಪ ಮತ್ತು ತಾಯಿ ಗೌರಮ್ಮ. ಬೈಂದೂರಿನಲ್ಲಿ ಶಾಲಾ ಶಿಕ್ಷಣ, ಮೈಸೂರಿನಲ್ಲಿ ಕಾಲೇಜು ವಿದ್ಯಾಭ್ಯಾಸ ಆಯಿತು. ಬಿ.ಎ. ಆನರ್ಸ್ ಪದವಿ (1942) ಗಳಿಸಿದ ನಂತರ ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಪ್ರೌಢಶಾಲೆಗಳಲ್ಲಿ ಅಧ್ಯಾಪಕರಾಗಿ ಕೆಲಸಮಾಡಿದ್ದರು. ಆಮೇಲೆ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದಿ ಎಂ.ಎ. ಪದವಿ (1947) ಗಳಿಸಿದರು. ಮೈಸೂರಿನ ಶಾರದಾವಿಲಾಸ್ ಕಾಲೇಜಿನಲ್ಲಿ ಉಪನ್ಯಾಸಕ (1948-52), ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ (1952-54) ...

READ MORE

Related Books