ಬಿಸಿಲ ಸೀಮೆಯ ಜಾನಪದ ಸಿರಿ

Author : ಲಕ್ಷ್ಮಣ ಬಾದಾಮಿ

Pages 176

₹ 160.00




Year of Publication: 2018
Published by: ಅಭಿಲಾಷ ಪ್ರಕಾಶನ,
Address: ಸಿರೂರ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
Phone: 9972135581

Synopsys

ಈ ಕೃತಿಯಲ್ಲಿ ಜಾನಪದ ಹಾಡು, ಕತೆ, ಒಗಟು ಒಡಪು ಮತ್ತು ನುಡಿಗಟ್ಟುಗಳನ್ನು ಸಂಗ್ರಹಿಸಲಾಗಿದೆ. ಇವೆಲ್ಲವೂ ರಾಯಚೂರು ಪರಿಸದ್ದಾಗಿವೆ. ಸಂಪ್ರದಾಯದ ಹಾಡುಗಳು ಜೊತೆಗೆ ಸ್ವಾರಸ್ಯಕರ ಕಥೆಗಳು ಇವೆ. ಒಗಟು, ಒಡುಪುಗಳಂತೂ ಇಂದಿನ ಪೀಳಿಗೆಯಿಂದ ಮರೆಯಾಗಿ ಹೋಗುತ್ತಿರುವಂಥವುಗಳನ್ನು ಸಂಗ್ರಹಿಸಲಾಗಿದೆ. ಈ ಕೃತಿಯ ಇನ್ನೊಂದು ವಿಶೇಷವೆಂದರೆ ಇಲ್ಲಿರುವ ಜನಪದ ಸಾಹಿತ್ಯವೆಲ್ಲವನ್ನು ಸಂಗ್ರಹಿಸಿದವರು ಪ್ರೌಢಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು. 

 

About the Author

ಲಕ್ಷ್ಮಣ ಬಾದಾಮಿ

ಲಕ್ಷ್ಮಣ ಬಾದಾಮಿ ಅವರ ಮೂಲ ಹೆಸರು ಲಕ್ಷ್ಮಣ ತುಕಾರಾಮ ಬಾದಾಮಿ. ಇವರು ಮೂಲತಃ ಬಾಗಲಕೋಟ ಜಿಲ್ಲೆ ಸಿರೂರು ಗ್ರಾಮದವರು. ಕಲಾ ವಿಭಾಗದಲ್ಲಿ ಎಂ.ಎಫ್.ಎ., ಎ.ಎಂ., ಜಿ.ಡಿ.(ಆರ್ಟ್) ಪೂರ್ಣಗೊಳಿಸಿದ್ದು, 2008ರಿಂದ ಸರಕಾರಿ ಪ್ರೌಢಶಾಲೆ ಕುರುಕುಂದದಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಕಲೆ ಹಾಗೂ ಸಾಹಿತ್ಯ ವೇದಿಕೆ, ಸಿರೂರದ ಮೂಲಕ ಕಳೆದ 15 ವರ್ಷಗಳಿಂದ ಸಾಹಿತ್ಯ, ಜಾನಪದ ಕಲೆಗಳ ಪುನರುತ್ಥಾನಕ್ಕಾಗಿ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದ್ದಾರೆ. ಕಲೆಯೊಂದಿಗೆ ಸಾಹಿತ್ಯದತ್ತರು ಆಸಕ್ತಿಹೊಂದಿರುವ ಅವರ ‘ಭವ’, ‘ಬೇರು ಮತ್ತು ಬೆವರು’, ‘ಒಂದು ಚಿಟಿಕೆ ಮಣ್ಣು’ ಎಂಬ ಕಥಾಸಂಕಲನಗಳನ್ನು ಪ್ರಕಟಿಸಿದ್ದಾರೆ. ‘ಮನುಷ್ಯರು ಬೇಕಾಗಿದ್ದಾರೆ’ ಅವರ ಪ್ರಕಟಿತ ಕವನ ...

READ MORE

Related Books