ಬೋಧಿಯ ನೆರಳಲ್ಲಿ

Author : ಎಂ.ಎ. ಹೆಗಡೆ

Pages 224

₹ 150.00




Year of Publication: 2018
Published by: ಸುವರ್ಣ ಮಹೋತ್ಸವ ಆಚರಣಾ ಸಮಿತಿ
Address: ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಸುವರ್ಣ ಮಹೋತ್ಸವ ಪುಸ್ತಕ ಮಾಲಿಕೆ, ಶ್ರೀಕ್ಷೇತ್ರ ಧರ್ಮಸ್ಥಳ

Synopsys

ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಸುವರ್ಣ ಮಹೋತ್ಸವ ಪುಸ್ತಕ ಮಾಲಿಕೆಯಡಿ ಸುವರ್ಣ ಸಂಚಯದ ಭಾಗ-3ರ ಕೃತಿಯಾಗಿ ಪ್ರಕಟಗೊಂಡಿದ್ದು, ಲೇಖಕ ಪ್ರೊ. ಎಂ.ಎ. ಹೆಗಡೆ ಅವರು ರಚಿಸಿದ್ದಾರೆ. ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಕೃತಿಗೆ ಮುನ್ನುಡಿ ಬರೆದು ‘ಅಧ್ಯಾತ್ಮಿಕ ವ್ಯಕ್ತಿತ್ವವನ್ನು ಜಾಗೃತಗೊಳಿಸುವ ಕಾರ್ಯಕ್ರಮಗಳು ಶ್ರೀ ಕ್ಷೇತ್ರದಲ್ಲಿ ನಿರಂತರವಾಗಿ ನಡೆಯುತ್ತಿದ್ದು, ಇವುಗಳು ನಮ್ಮ ಬರಹದ ಸೀಮೆಯೊಳಗೆ ಸಿಗದಂತಹ ಸಾಧನಗಳಾಗಿವೆ. ಇವುಗಳನ್ನು ಸೀಮಿತ ಪದಗಳ ಮೂಲಕ ಸೆರೆ ಹಿಡಿಯುವ ಪ್ರಯತ್ನವನ್ನು ‘ಬೋಧಿಯ ನೆರಳಲ್ಲಿ’ ಎಂಬ ಗ್ರಂಥದಲ್ಲಿ ಮಾಡಲಾಗಿದೆ. ಗ್ರಂಥಕರ್ತರಾದ ಪ್ರೊ. ಎಂ.ಎ. ಹೆಗಡೆ ಅವರು ವಿದ್ವತ್ಪೂರ್ಣವಾಗಿ ಕ್ಷೇತ್ರದ ಸಾಧನೆಗಳನ್ನು ಸೆರೆ ಹಿಡಿದಿದ್ದಾರೆ. ಅವರ ವಿದ್ವತ್ತು ಬರಹಗಳಲ್ಲಿ ಪ್ರತಿಫಲಿಸಿದೆ’ ಎಂದು ಶ್ಲಾಘಿಸಿದ್ದಾರೆ. ಡಿ. ಹರ್ಷೇಂದ್ರಕುಮಾರ ಅವರು ಕೃತಿಯ ಸಂಪಾದಕರು.

About the Author

ಎಂ.ಎ. ಹೆಗಡೆ
(03 July 1948)

ಇವರು  ದಿನಾಂಕ 3-7-1948 ರಂದು ಜನಿಸಿದರು. ಈಗಿನ ವಾಸ ಶಿರಸಿಯಲ್ಲಿ. ತಂದೆ ಅಣ್ಣಪ್ಪ ಹೆಗಡೆ ಮತ್ತು ತಾಯಿ ಕಾಮಾಕ್ಷಿ. ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಜೋಗಿನ್ಮನೆಯವರಾದ ಹೆಗಡೆಯವರು ಸಂಸ್ಕೃತ ವಿದ್ವಾಂಸರು ಮತ್ತು ಗ್ರಂಥಕರ್ತರು , ಭಾಷಾಶಾಸ್ತ್ರಜ್ಞರು. ಇವರು ಹುಬ್ಬಳ್ಳಿಯ ಕಾಡಸಿದ್ದೇಶ್ವರ ಆರ್ಟ್ಸ್   ಕಾಲೇಜು ಮತ್ತು ಪಿ.ಸಿ.ಜಾಬಿನ್ ಸೈನ್ಸ್ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ೧೯೭೧ರಿಂದ ೧೯೭೩ರ ವರೆಗೆ ಸೇವೆಸಲ್ಲಿಸಿದ್ದಾರೆ. ಸಿದ್ದಾಪುರದ ಮಹಾತ್ಮಾ ಗಾಂಧಿ ಶತಾಬ್ಧಿ ಕಾಲೇಜಿನಲ್ಲಿ ಸಂಸ್ಕೃತ ಉಪನ್ಯಾಸಕರಾಗಿ,ಆ ವಿಭಾಗದ ಮುಖ್ಯಸ್ಥರಾಗಿ ೧೯೭೩ ರಿಂದ ೨೦೦೪ ರ ವರೆಗೆ ಸೇವೆಸಲ್ಲಿಸಿದ್ದಾರೆ. ಅದೇ ಕಾಲೇಜಿನಲ್ಲಿ ೨೦೦೪ ರಿಂದ ೨೦೦೬ ರವರೆಗೆ ...

READ MORE

Related Books