ಬುದ್ಧ ಬೆಳದಿಂಗಳು

Author : ಮೂಡ್ನಾಕೂಡು ಚಿನ್ನಸ್ವಾಮಿ

Pages 88

₹ 65.00




Year of Publication: 2010
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಮೂಡ್ನಾಕೂಡು ಚಿನ್ನಸ್ವಾಮಿ ಅವರು ಕಾವ್ಯ ಕ್ರೋಧದ ನೆಲೆಯಲ್ಲಿ ಮಾತ್ರ ನಿಲ್ಲದೆ ನಮ್ಮ ಅರಿವನ್ನು ಹಿಗ್ಗಿಸುವ ದುಃಖದ ಸಂವೇದನೆಯಾಗುತ್ತದೆ. ಮೊದಲ ಓದಿಗೇ ಅರ್ಥವಾಗುವ ಇವರ ಸರಳತೆ ಮತ್ತೊಂದು ಓದಿನಲ್ಲಿ ಗಾಢವಾದ ಅನುಭವವನ್ನು ಕೊಡುತ್ತದೆ. ಇವರು ಕನ್ನಡ ಭಾಷೆಯನ್ನು ಅದರ ಎಲ್ಲಾ ಸಂಪತ್ತಿನಲ್ಲೂ ಬಳಸಬಲ್ಲರು. ಬೌದ್ಧ ಧರ್ಮ ತನ್ನೆಲ್ಲ ಅರ್ಥಗಳನ್ನು ಸದ್ಯದ ಸಂಕಷ್ಟದಲ್ಲಿ ಬಿಚ್ಚಿಡುವಂತೆ ಬರೆಯುವ ಚಿನ್ನಸ್ವಾಮಿ ನಮ್ಮ ಮಖ್ಯ ಕವಿಗಳಲ್ಲಿ ಒಬ್ಬರು. ಈ ಸಂಕಲನ ದಲಿತಸ್ಥಿತಿಗೆ ಮಿಡಿಯುತ್ತಲೇ ಮಾನವ ಅಂತಃಕರಣವನ್ನು ಹಿಗ್ಗಿಸಿ ಅಸ್ಪೃಶ್ಯತೆಯ ಚಾರಿತ್ರಿಕ ಅವಮಾನದಿಂದ ನಮ್ಮನ್ನು ಬಿಡುಗಡೆ ಮಾಡುವಂತಹ ಅರಿವು ಮೂಡಿಸುತ್ತದೆ. 

About the Author

ಮೂಡ್ನಾಕೂಡು ಚಿನ್ನಸ್ವಾಮಿ
(22 September 1954)

ದಲಿತ-ಬಂಡಾಯ ಸಾಹಿತ್ಯ ಚಳವಳಿಯ ಸತ್ವಪೂರ್ಣ ದನಿಯಾಗಿರುವ ಕವಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಮೂಲತಃ ಗಡಿನಾಡಾದ ಚಾಮರಾಜನಗರದವರು. ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾದ ಅವರು ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರಲ್ಲದೆ, ನಿರ್ದೇಶಕರು(ಹಣಕಾಸು) ಹಾಗೂ ಆರ್ಥಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸಿ ಮಾರ್ಚ್ 2012ರಲ್ಲಿ ನಿವೃತ್ತಿ ಹೊಂದಿದ್ದಾರೆ. ಜೊತೆಗೆ ಏಪ್ರಿಲ್ 2015 ರಿಂದ ಮಾರ್ಚ್ 2017 ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. 2016-17 ರ ಸಾಲಿಗೆ ಮೈಸೂರು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ...

READ MORE

Related Books