ಬುದ್ದಭಕ್ತರ ನಾಡಿನಲ್ಲಿ

Author : ಎಸ್.ಪಿ. ಪದ್ಮಪ್ರಸಾದ್‌

Pages 368

₹ 340.00




Year of Publication: 2021
Published by: ಶ್ರೀ ರಾಮ ಪ್ರಕಾಶನ
Address: #893/ಡಿ, 3ನೇ ಕ್ರಾಸ್, ಈಸ್ಟರ್ನ್ ಎಕ್ಟೆನ್ ಕ್ಷನ್, ನೆಹರು ನಗರ ಮಂಡ್ಯ- 571401
Phone: 9448930173

Synopsys

‘ಬುದ್ಧಭಕ್ತರ ನಾಡಿನಲ್ಲಿ’ ಕೃತಿಯು ಎಸ್. ಪಿ ಪದ್ಮಪ್ರಸಾದ್ ಅವರ ಪ್ರವಾಸ ಕಥನವಾಗಿದೆ. ಮ್ಯಾನ್ಮಾರ್ ದೇಶವನ್ನು ಕುರಿತಂತೆ ಕನ್ನಡದಲ್ಲಿ ಬಂದಿರುವ ಅಪರೂಪದ ಕೃತಿ ಇದು. ಇಲ್ಲಿ ಲೇಖಕ 15 ದಿನಗಳ ಕಾಲ ಆ ದೇಶದ ಉದ್ದಗಲಕ್ಕೂ ತಿರುಗಾಡಿ ಅಲ್ಲಿನ ಪ್ರೇಕ್ಷಣೀಯ ಸ್ಥಳಗಳು, ಬೌದ್ಧ ಸಂಪ್ರದಾಯಗಳು, ಜನಜೀವನ ಇತ್ಯಾದಿ ಬಗ್ಗೆ ವಿವರವಾಗಿ ಅಧ್ಯಯನ ಮಾಡಿ ಸಂಗ್ರಹಿಸಿದ ಮಾಹಿತಿಯನ್ನು ರಂಜನೀಯ ಶೈಲಿಯಲ್ಲಿ ನಿರೂಪಿಸಿದ್ದಾರೆ. ಸುಮಾರು ಅರವತ್ತು ಛಾಯಾಚಿತ್ರಗಳನ್ನೂ ಹೊಂದಿರುವ ಈ ಕೃತಿ ಕನ್ನಡ ಸಾಹಿತ್ಯಕ್ಕೆ ಒಂದು ಉಪಯುಕ್ತವಾದ ಕೃತಿಯಾಗಿದೆ.

About the Author

ಎಸ್.ಪಿ. ಪದ್ಮಪ್ರಸಾದ್‌

ಎಸ್.ಪಿ. ಪದ್ಮಪ್ರಸಾದ್‌ ಜಾನಪದ, ಕಾವ್ಯ, ನಾಟಕ, ವಿಮರ್ಶೆ ಮುಂತಾದ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಪದ್ಮ ಪ್ರಸಾದವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ.  ತಂದೆ ಎಸ್.ಪಿ. ಪಾಯಪ್ಪಶೆಟ್ಟಿ, ತಾಯಿ ಜಿನ್ನಮ್ಮ. ಪ್ರಾರಂಭಿಕ ಶಿಕ್ಷಣ ಹೊಸನಗರದಲ್ಲಿ. ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಿಂದ ಬಿ.ಎಸ್ಸಿ ಪದವಿ ಮತ್ತು ನ್ಯಾಷನಲ್ ಕಾಲೇಜ್ ಆಫ್ ಎಜುಕೇಷನ್‌ನಿಂದ ಬಿ.ಇಡಿ. ಪದವಿಯನ್ನೂ,. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಹಾಗೂ ‘‘ಜೈನ ಜನಪದ ಸಾಹಿತ್ಯ-ಸಂಪಾದನೆ ಹಾಗೂ ಅಧ್ಯಯನ’’ ಪ್ರಬಂದ ಮಂಡಿಸಿ ಬೆಂಗಳೂರು ವಿಶ್ವ ವಿದ್ಯಾಲಯದಿಂದ ಪಡೆದ ಪಿಎಚ್.ಡಿ. ಪದವಿ ಪಡೆದಿದ್ದಾರೆ.  ಹೈಸ್ಕೂಲು ಅಧ್ಯಾಪಕರಾಗಿ ಪಿಎಚ್.ಡಿ. ಪದವಿಗಳಿಸಿದ ರಾಜ್ಯದ ...

READ MORE

Related Books