
‘ಬ್ಯಾಡಗಿ ತಾಲ್ಲೂಕು ದರ್ಶನ’ ಕೃತಿಯು ಬಿ.ಎಂ. ಜಗಾಪೂರ ಅವರ ಲೇಖನಸಂಕಲನವಾಗಿದೆ. ಈ ಕೃತಿಯು ನಾಡೋಜ ಮಹೇಶ ಜೋಶಿ ಅವರ ಪ್ರಧಾನ ಸಂಪಾದಕತ್ವದಲ್ಲಿ ಹಾಗೂ ಲಿಂಗಯ್ಯ ಬಿ. ಹಿರೇಮಠ ಅವರ ಸಂಪಾದನೆಯಲ್ಲಿ ಹಾವೇರಿಯಲ್ಲಿ ನಡೆದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಬಿಡುಗಡೆಗೊಂಡಿದೆ. ಬ್ಯಾಡಗಿ ತಾಲ್ಲೂಕಿನ ಸಾಂಸ್ಕೃತಿಕ ನೆಲೆಗಳು, ಜನರ ಜೀವನ ಶೈಲಿ, ಪ್ರಸಿದ್ಧ ಸ್ಥಳಗಳ ಹಿನ್ನೆಲೆ, ಆಚಾರ-ವಿಚಾರ ಪಲ್ಲಟಗಳು ಸೇರಿದಂತೆ ಹಲವಾರು ಸಂಗತಿಗಳನ್ನು ಇಲ್ಲಿ ಲೇಖಕರು ಕಟ್ಟಿಕೊಟ್ಟಿದ್ದಾರೆ.
©2025 Book Brahma Private Limited.