ಬ್ಯಾರಿಸ್ಟರ್ ರಾಜಾ ವೆಂಕಟಪ್ಪ ನಾಯಕ

Author : ಶಿವರಾಮ ಅಸುಂಡಿ

Pages 96

₹ 70.00




Year of Publication: 2014
Published by: ಪ್ರಸಾರಾಂಗ, ಗುಲ್ಬರ್ಗಾ ವಿ.ವಿ.

Synopsys

ಬ್ಯಾರಿಸ್ಟರ್ ರಾಜಾ ವೆಂಕಟಪ್ಪ ನಾಯಕ ಸ್ವಾತಂತ್ರ್ಯ ಹೋರಾಟಗಾರನ ಜೀವನ ಚರಿತ್ರೆ. ಸುರಪುರ ಸಂಸ್ಥಾನದ ಕುಡಿಯೆನಿಸಿಕೊಂಡ ಬ್ಯಾರಿಸ್ಟರ್ ರಾಜಾ ವೆಂಕಟಪ್ಪ ನಾಯಕ ವಿಜಯಪುರ ಗಡಿಯಲ್ಲಿ ತಾಳಿಕೋಟೆ ಶಿಬಿರ ಅಸ್ತಿತ್ವಕ್ಕೆ ದಂದು ಹೈದರಾಬಾದ್ ನಿಜಾಮನ ವಿರುದ್ಧ ಹೋರಾಟ ಮಾಡುವ ಮೂಲಕ ಈ ಭಾಗಕ್ಕೆ ವಿಮೋಚನೆ ತಂದುಕೊಟ್ಟ ರೋಚಕ ಕಥೆಯನ್ನು ಕಟ್ಟಿಕೊಡಲಾಗಿದೆ. ಬ್ಯಾರಿಸ್ಟರ್ ರಾಜಾ ವೆಂಕಟಪ್ಪ ನಾಯಕನ ಜೀವನ ಚರಿತ್ರೆ ಕಟ್ಟಿಕೊಡುವ ಜೊತೆಯಲ್ಲಿಯೇ ಸುರಪುರ ಸಂಸ್ಥಾನ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ನೀಡಿದ ಕೊಡು, ಹೈದರಾಬಾದ್ ಪ್ರಾಂತ್ಯದ ವಿಮೋಚನಾ ಹೋರಾಟದ ಸಂಕ್ಷಿಪ್ತ ಇತಿಹಾಸ ಕಟ್ಟಿಕೊಡಲಾಗಿದೆ. ಬ್ಯಾರಿಸ್ಟರ್ ಜೀವನ ಚರಿತ್ರೆ ಸಂಕ್ಷಿಪ್ತ ರೂಪದಲ್ಲಿ ಗುಲ್ಬರ್ಗಾ ವಿ.ವಿ. ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಬೇಸಿಕ್ ಪಠ್ಯವಾಗಿ ಅಳವಡಿಸಲಾಗಿದೆ.

About the Author

ಶಿವರಾಮ ಅಸುಂಡಿ

ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಲೇ ಸಾಹಿತ್ಯ ಕೃಷಿಯಲ್ಲಿ ತೊಡಗಿಕೊಂಡಿರುವ ಶಿವರಾಮ ಅಸುಂಡಿ ಅವರು ಮೂಲತಃ ಬಳ್ಳಾರಿ ಜಿಲ್ಲೆಯ ಅಸುಂಡಿ ಗ್ರಾಮದವರು. ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆ ಆರಂಭಿಸಿ ಮಾಧ್ಯಮದೊಂದಿಗೆ ನಂಟು ಬೆಳೆಸಿಕೊಂಡರು. ಎಂ.ಎ., ಎಂ.ಫಿಲ್., ಪಿಎಚ್.ಡಿ. ಪದವಿ ಪಡೆದಿರುವ ಅವರು ಸಂಶೋಧನಾ ವಿದ್ಯಾರ್ಥಿಯಾಗಿದ್ದಾಗಲೇ ಮಾಧ್ಯಮ ಕ್ಷೇತ್ರ ಪ್ರವೇಶಿಸಿದರು. ಬಳ್ಳಾರಿಯ ’ಈ ನಮ್ಮ ಕನ್ನಡ ನಾಡು’ ದೈನಿಕದಲ್ಲಿ ಉಪ ಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ .ಟಿ.ವಿ.ಗೆ ಸೇರಿ ಹಾವೇರಿಯಲ್ಲಿ ಎರಡು ವರ್ಷ ಸೇವೆ ಸಲ್ಲಿಸಿದರು. 2004ರಿಂದ ಕಲಬುರಗಿಯಲ್ಲಿ ಈಟಿವಿ ಪ್ರತಿನಿಧಿಯಾಗಿದ್ದಾರೆ.  ’ದು.ನಿಂ.ಬೆಳಗಲಿ ಅವರ ದೇವದಾಸಿ’ ಕಾದಂಬರಿ ಕುರಿತು ಎಂ.ಫಿಲ್. ಪದವಿ ಮಾಡಿರುವ ಅಸುಂಡಿ ಅವರು ಡಾ.ಮಲ್ಲಿಕಾ ಘಂಟಿ ಮಾರ್ಗದರ್ಶನದಲ್ಲಿ ’ದಲಿತ ...

READ MORE

Related Books