ಚಾಮರಸನ ಪ್ರಭುಲಿಂಗ ಲೀಲೆ

Author : ಎಸ್. ವಿದ್ಯಾಶಂಕರ

Pages 434

₹ 315.00




Year of Publication: 2020
Published by: ಪ್ರಿಯದರ್ಶಿನಿ ಪ್ರಕಾಶನ
Address: # 138, 7ನೇ ಸಿ ಮುಖ್ಯರಸ್ತೆ, ಹಂಪಿನಗರ, ಬೆಂಗಳೂರು-04

Synopsys

ಖ್ಯಾತ ಸಾಹಿತಿ ಎಸ್. ವಿದ್ಯಾಂಶಕರ ಅವರು ಸಂಪಾದಿತ ಕೃತಿ-ಚಾಮರಸನ ಪ್ರಭುಲಿಂಗ ಲೀಲೆ. ಈ ಕೃತಿಯು ಭಾಮಿನಿ ಷಟ್ಪದಿಯಲ್ಲಿ ಬರೆಯಲಾಗಿದ್ದು, ಇಮ್ಮಡಿ ಪ್ರೌಢದೇವರಾಯರ ರಾಜಾಶ್ರಯದಲಿದ್ದನು.. ಅನ್ಯಮತ ಕೋಳಾಹಲ, ವೀರಶೈವಾಚಾರ ಮಾರ್ಗ ಸಾರೋದ್ಧಾರ ಇವರ ಬಿರುದುಗಳು. 25 ಗತಿಗಳು ಮತ್ತು 1111 ಪದ್ಯಗಳನ್ನು ಒಳಗೊಂಡಿರುವ ಕಾವ್ಯವಿದು. ಕಾವ್ಯದ ಉದ್ದಕ್ಕೂ ಅಲ್ಲಮನ ಚರಿತ್ರೆಯನ್ನು ಚಿತ್ರಿಸಲಾಗಿದೆ. ಇಲ್ಲಿಯ ಭಾಷೆ ತೀರಾ ನಯಗಾರಿಕೆಯಿಂದ ಕೂಡಿದ್ದು, 12ನೇ ಶತಮಾನದ ಶಿವಶರಣ-ಶಿವಶರಣೆಯರನ್ನು ಈ ಕವಿಯು ಚೆನ್ನಾಗಿ ಅಧ್ಯಯನ ಮಾಡಿದ್ದ ಎಂಬುದಕ್ಕೆ ಕನ್ನಡಿ ಹಿಡಿಯುತ್ತದೆ. ಪ್ರಭುಲಿಂಗ ಲೀಲೆಯು ಉತ್ತಮ ಕಾವ್ಯ ಎಂಬುದನ್ನು ಸ್ವತಃ ಕವಿ ಚಾಮರಸನೇ ಹೀಗೆ ಹೇಳಿಕೊಂಡಿದ್ದು ಸತ್ಯಶರಣರು ತಿಳಿವುದೀ ಪ್ರಭುಲಿಂಗಲೀಲೆಯನು’ ಅತಿಶಯೋಕ್ತಿಯಲ್ಲ.

About the Author

ಎಸ್. ವಿದ್ಯಾಶಂಕರ

ಎಸ್. ವಿದ್ಯಾಶಂಕರ ಅವರು ಚಾಮರಾಜ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿಯಲ್ಲಿ ಜನಿಸಿದರು. ತಂದೆ ವಿದ್ವಾನ್' ಸ.ಸ. ಶಿವಶಂಕರಪ್ಪ ತಾಯಿ ವಿಶಾಲಾಕ್ಷಮ್ಮ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು ೧೯೬೬ರಲ್ಲಿ ಧಾರವಾಡದ ಕರ್ನಾಟಕ ವಿ.ವಿ.ಯಲ್ಲಿ ಎಂ.ಎ. ಪದವಿ ಗಳಿಸಿ ೧೯೭೧ರಲ್ಲಿ ಬೆಂಗಳೂರು ವಿ.ವಿ. ಪಿಎಚ್.ಡಿ. ಪದವಿ ಗಳಿಸಿದರು. ಬೆಂಗಳೂರು ವಿ.ವಿ. ಕನ್ನಡ ವಿಭಾಗದ ಸ್ನಾತಕೋತ್ತರ ಸಂಶೋಧನ ಸಹಾಯಕರಾಗಿ ಸೇವೆ ಸಲ್ಲಿಸಿ ೧೯೭೦ ರಿಂದ ೮೫ರರಿಗೆ ಕನ್ನಡ ಅಧ್ಯಯನ ಕೇಂದ್ರದಲ್ಲಿ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ ನಂತರ ನಿರ್ದೇಶಕರಾಗಿ ಸೇವೆ ಸಲ್ಲಿಸಿ ೨೦೦೧ರಲ್ಲಿ ವೃತ್ತಿಯಿಂದ ವಿಶ್ರಾಂತಿ ಪಡೆದರು. ೧೯೯೫೪-೯೭ರಲ್ಲಿ ಹಂಪಿಯ ಕನ್ನಡ ...

READ MORE

Related Books