ಚಂಪೂ ಕವಿಗಳು ಕೃತಿಯ ವಿಶೇಷವೆನೆಂದರೆ ಇಡೀ ಕನ್ನಡ ಸಾಹಿತ್ಯದ ಚರಿತ್ರೆಯನ್ನು ಚಂಪೂ, ಶಾಸ್ತ್ರ ಸಾಹಿತ್ಯ, ವಚನ, ಪಟ್ಪದಿ ಹೀಗೆ ಪ್ರಮುಖವಾದ ಸಾಹಿತ್ಯ ರೂಪಗಳನ್ನು ಮೂಲಮಾನವನ್ನಾಗಿ ಮಾಡಿಕೊಂಡು ಬರೆದದ್ದು ಇದೇ ಮೊದಲು, ಮತ್ತು ಈ ಬರವಣಿಗೆ ಸಾಧ್ಯವಾದ ಮಟ್ಟಿಗೆ ಇದುವರೆಗೂ ಉಪಲಬ್ದದ ಸಾಮಗ್ರಿಯನ್ನು ಬಳಸಿಕೊಳ್ಳುವುದಲ್ಲದೆ, ಕೆಲವು ಸಂಪುಟಗಳಲ್ಲಿ ಹೊಸ ದೃಷ್ಟಿಕೋನವನ್ನೂ ಪ್ರತಿಪಾದಿಸುವಂತೆ ರಚಿತವಾಗಿದೆ. ಈ ಹತ್ತು ಕಿರು ಸಂಪುಟಗಳನ್ನು ಓದಿದ ಯಾರಿಗಾದರೂ ಕನ್ನಡ ಸಾಹಿತ್ಯದ ಸಾಧನೆಯ ಪರಿಚಯ ತಕ್ಕಮಟ್ಟಿಗೆ ಆಗುವುದೆಂಬುದರಲ್ಲಿ ಅನುಮಾನವಿಲ್ಲ ಎಂದು ಜಿ.ಎಸ್ ಶಿವರುದ್ರಪ್ಪ ಪುಸ್ತಕದ ಮುನ್ನುಡಿಯಲ್ಲಿ ತಿಳಿಸಿದ್ದಾರೆ.
©2024 Book Brahma Private Limited.