ಚಂದ್ರಶೇಖರ ಆಜಾದ್

Author : ಬಾಬು ಕೃಷ್ಣಮೂರ್ತಿ

Pages 102

₹ 15.00




Year of Publication: 1976
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಬೆಂಗಳೂರು-19.

Synopsys

ಚಂದ್ರಶೇಖರ ಆಜಾದ್ ಅವರ ಜೀವನಚರಿತ್ರೆ ಪುಸ್ತಕವಿದು. ಲೇಖಕ ಬಾಬು ಕೃಷ್ಣಮೂರ್ತಿ ಅವರು ರಚಿಸಿದ್ದಾರೆ. ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ ಆಜಾದ್ ಅವರ ಜೀವನದ ಪ್ರಮುಖ ಘಟ್ಟಗಳನ್ನು ಚಿತ್ರಿಸಲಾಗಿದೆ. ದೇಶದ ಸ್ವಾತಂತ್ರ್ಯವನ್ನು ಕಿತ್ತುಕೊಂಡ ವಿದೇಶಿಯರ ವಿರುದ್ಧ ಪ್ರಾಣವನ್ನೇ ಪಣವಾಗಿಟ್ಟು ಹೋರಾಡಿದ ಕ್ರಾಂತಿವೀರ. ಹುಡುಗನಾಗಿದ್ದಾಗಲೇ ಆಜಾದ್ ಅಸಾಧಾರಣ ಧೈರ್ಯವನ್ನು ತೋರಿಸಿದ. ಇಪ್ಪತ್ತನಾಲ್ಕನೆ ವಯಸ್ಸಿಗೆ ದೇಶದ ನಿಷ್ಕರುಣ ಶತ್ರುಗಳ ಗುಂಡಿಗೆ ಆಹುತಿಯಾದ ಆಜಾದ್, ಜನರ ನೆನಪಿನ ಆಕಾಶದಲ್ಲಿ ಧ್ರುವನಕ್ಷತ್ರ ಎಂದು ಚಂದ್ರಶೇಖರ ಆಜಾದ್ ಅವರ ಕುರಿತಾಗಿ ವಿವರಿಸಲಾಗಿದೆ.

About the Author

ಬಾಬು ಕೃಷ್ಣಮೂರ್ತಿ

ಸಾಹಿತ್ಯ, ಪತ್ರಿಕೋದ್ಯಮ ಎರಡು ಕ್ಷೇತ್ರಗಳಲ್ಲೂ ಚಿರಪರಿಚಿತರಾದ ಬಾಬು ಕೃಷ್ಣಮೂರ್ತಿ ಹುಟ್ಟಿದ್ದು ಬೆಂಗಳೂರು. ಸಾಹಿತ್ಯ ಹಾಗೂ ಪತ್ರಿಕೋದ್ಯಮದಲ್ಲಿ ಅತೀವ ಆಸಕ್ತಿ. ಅವರ ಸಂಪಾದಕತ್ವದಲ್ಲಿ ಬಾಲಮಂಗಳ (ಪಾಕ್ಷಿಕ), ಬಾಲಮಂಗಳ ಚಿತ್ರಕಥಾ (ಮಕ್ಕಳ ವ್ಯಂಗ್ಯ ಚಿತ್ರ ಪಾಕ್ಷಿಕ), ಗಿಳಿವಿಂಡು (ಶಿಶು ಪಾಕ್ಷಿಕ ಪತ್ರಿಕೆ) ಪ್ರಕಟವಾಗಿವೆ. ಇವರು ರಚಿಸಿದ ಸ್ವಾತಂತ್ರ್ಯವೀರ ಚಂದ್ರಶೇಖರ ಆಜಾದ್ ಕುರಿತು ಆರು ವರ್ಷ ಕಾಲ ಸಂಶೋಧನೆ, ಸ್ಥಳವೀಕ್ಷಣೆ ನಡೆಸಿ ರಚಿಸಿದ ಕೃತಿ ‘ಅಜೇಯ’. ಅವರ ಪ್ರಮುಖ ಕೃತಿಗಳು - ಅಜೇಯ (1974), ಸಿಡಿಮದ್ದು ನೆತ್ತರು ನೇಣುಗಂಬ (1984), ಅದಮ್ಯ (1984), ರುಧಿರಾಭಿಷೇಕ (2005), ಡಾ. ಸಿ.ಜಿ. ಶಾಸ್ತಿಒಂದು ಯಶೋಗಾಥೆ (2007), 1857-ಭಾರತದ ಸ್ವಾತಂತ್ರ್ಯ ಸಂಗ್ರಾಮ (2007), ...

READ MORE

Related Books