ಚೆರ್ರಿ ತೋಪು

Author : ಕೆ.ವಿ. ಅಕ್ಷರ

Pages 80

₹ 65.00




Year of Publication: 2010
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

‘ಚೆರ್ರಿ ತೋಪು’ ನಾಟಕದ ಕಥೆ ಆ ಕಾಲದ ರಷಿಯಾದ -- ಮತ್ತು ವಿಶಾಲವಾಗಿ ಇಪ್ಪತ್ತನೆಯ ಶತಮಾನದ ಆರಂಭಕಾಲದ ಪಾಶ್ಚಿಮಾತ್ಯ ಜಗತ್ತಿನ -- ಚರಿತ್ರೆಯ ಗತಿಯನ್ನೇ ನಿರೂಪಿಸುವಂಥದು; ಬಂಡವಾಳಶಾಹಿ ಯುಗದ ಆರಂಭದ ಲೋಕವೊಂದನ್ನು ಕಾಣಿಸುವಂಥದು. ಈ ನಾಟಕದಲ್ಲಿ, ಸಾಲಕ್ಕೆ ಆಧಾರವಾಗಿರುವ ಒಂದು ಜಮೀನ್ದಾರೀ ಕುಟುಂಬದ ಚೆರ್ರಿ ತೋಟ ಹರಾಜಿಗೆ ಬಂದಿದೆ. ಅದನ್ನು ನಿವೇಶನಗಳಾಗಿ ಮಾರ್ಪಡಿಸಿ ಮಾರಿದರೆ ಸಾಲ ತೀರುತ್ತದೆ. ಆದರೆ ಆ ತೋಟದೊಂದಿಗೆ ಭಾವನಾತ್ಮಕ ಸಂಬಂಧವಿಟ್ಟುಕೊಂಡಿರುವ ಒಡತಿ ರೆನೆವಸ್ಕಾಯಾ ಹಾಗೆ ಮಾಡಲು ಒಪ್ಪುವುದಿಲ್ಲ. ಅತ್ತ, ಹರಾಜೂ ನಿಲ್ಲುವುದಿಲ್ಲ. ಈ ಮನೆಯಲ್ಲಿ ಒಕ್ಕಲಾಗಿದ್ದು ಈಗ ಹಣವಂತನಾಗಿರುವ ಲೋಪಾಹಿನ್‌ನೇ ತೋಟವನ್ನು ಕೊಳ್ಳುತ್ತಾನೆ. ಚೆರ್ರಿಮರಗಳನ್ನು ಕಡಿದು ಉರುಳಿಸುತ್ತಿರುವ ಶಬ್ದದ ಹಿನ್ನೆಲೆಯಲ್ಲಿ ಈ ಕುಟುಂಬ ಮನೆಯನ್ನು ಬಿಟ್ಟು ಹೊರಡುವಲ್ಲಿಗೆ ಈ ನಾಟಕ ಮುಗಿಯುತ್ತದೆ. ವಿಶೇಷವಾದ ನಾಟಕೀಯತೆಯೇನೂ ಇಲ್ಲದ ಈ ಕಥೆಯನ್ನು ಚೆಕಾವ್ ನಿರೂಪಿಸುವ ರೀತಿಯಿಂದಲೇ ಈ ಕೃತಿಯು ಎಲ್ಲ ಕಾಲಕ್ಕೂ ಸಲ್ಲುವ ಮಾನವವ್ಯಾಪಾರಗಳ ಒಂದು ದರ್ಶನವಾಗಿಯೂ ಪರಿವರ್ತಿತವಾಗುತ್ತದೆ.

About the Author

ಕೆ.ವಿ. ಅಕ್ಷರ

ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ರಂಗಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕೆ.ವಿ. ಅಕ್ಷರ ಅವರು ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ಅಧ್ಯಾಪಕ. ಖ್ಯಾತ ರಂಗ ನಿರ್ದೇಶಕರಾಗಿರುವ ಅವರು ಸೃಜನಶೀಲ ಸಾಹಿತಿ, ನಾಟಕ, ಕವನ, ಪ್ರಬಂಧಗಳನ್ನು ರಚಿಸಿದ್ದಾರೆ.  ಸಹ್ಯಾದ್ರಿಕಾಂಡ, ಚೂರಿಕಟ್ಟೆ (ನಾಟಕಗಳು), ಹದಿಹರೆಯದ ಹಾಡುಗಳು (ಕವನ ಸಂಕಲನ), ರಂಗಪ್ರಪಂಚ, ರಂಗಪ್ರಯೋಗ, ರಂಗ ಅನ್ವೇಷಣೆ, ರಂಗಭೂಮಿ- ಪೂರ್ವ ಪಶ್ಚಿಮ (ರಂಗಕೃತಿ), ಮಾವಿನ ಮರದಲ್ಲಿ ಬಾಳೆಹಣ್ಣು (ವಿಮರ್ಶೆ). ಕರ್ನಾಟಕ ನಾಟಕ ಅಕಾಡೆಮಿಯ ಫೆಲೋಶಿಪ್ (2000) ಲಭಿಸಿದೆ. ...

READ MORE

Related Books