ಚಿತ್ತಗಾಂಗ್ ವಿಪ್ಲವ ವನಿತೆಯರು

Author : ಸ. ರಘುನಾಥ

Pages 200

₹ 190.00




Year of Publication: 2021
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರ ಪಾರ್ಕ್ (ಪೂರ್ವ), ಬೆಂಗಳೂರು-560001,
Phone: 08022161900,

Synopsys

ಚಿತ್ತಗಾಂಗ್ ನ ಕ್ರಾಂತಿಕಾರಿ ಮಹಿಳೆಯರ ಕುರಿತು ಲೇಖಕಿ ಚೈತನ್ಯ ಪಿಂಗಳಿ ಅವರು ತೆಲುಗು ಭಾಷೆಯಲ್ಲಿ ಬರೆದಿದ್ದನ್ನು ಹಿರಿಯ ಲೇಖಕ ಸ. ರಘುನಾಥ ಅವರು ಕನ್ನಡಕ್ಕೆ ಅನುವಾದಿಸಿದ ಕೃತಿ-ಚಿತ್ತಗಾಂಗ್ : ವಿಪ್ಲವ ವನಿತೆಯರು. ಚೈತನ್ಯ ಪಿಂಗಳಿ ಅವರಿಗ ಚರಿತ್ರೆ ಮತ್ತು ಸಮಾಜ ಆಸಕ್ತಿಯ ಕ್ಷೇತ್ರಗಳು. ಈ ವಿಭಾಗಗಳನ್ನು ಶೋಷಣೆ, ಜಾತಿಯ ನೆಲೆಯಲ್ಲಿ ಅರ್ಥೈಸಬೇಕು ಎಂಬುದು ಅವರ ಅಭಿಪ್ರಾಯ. ದೇಶದ ಸ್ವಾತಂತ್ಯ್ರಕ್ಕಾಗಿ ಚಿತ್ತಗಾಂಗ್ ನಲ್ಲಿ ನಡೆದ ಹೋರಾಟವು ರಕ್ತಸಿಕ್ತವಾಗಿತ್ತು. ಬ್ರಿಟಿಷರ ಕಾನೂನುಗಳು ಜೀವಬಲಿ ತೆಗೆದುಕೊಳ್ಳುತ್ತವೆ ಎಂದು ಗೊತ್ತಿದ್ದರೂ ಆ ಅಧಿಪತ್ಯದ ಎದುರು ಹೋರಾಟಕ್ಕಿಳಿಯುವ ಮಹಿಳೆಯರ ಧೀರತನವನ್ನು ಅತ್ಯಂತ ಪರಿಣಾಮಕಾರಿಯಾಗಿ ಚಿತ್ರಿಸಲಾಗಿದೆ. ಸ್ತ್ರೀಪರ ಚಿಂತನೆ, ಸ್ವಾತಂತ್ಯ್ರ ಸಂಗ್ರಾಮದಲ್ಲಿ ಅವರ ಪಾತ್ರ, ತ್ಯಾಗ, ಹೋರಾಟ, ಸಹಿಷ್ಣುತಾ ಮನೋಭಾವ ಇತ್ಯಾದಿ ಕೃತಿಯಲ್ಲಿ ಅಡಕವಾಗಿವೆ. 2016ರಲ್ಲಿ, ಈ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯು ಯುವ ಪುರಸ್ಕಾರ ಪ್ರಶಸ್ತಿ ನೀಡಿದೆ.

About the Author

ಸ. ರಘುನಾಥ
(13 August 1954)

ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ  ಸ.ರಘುನಾಥ,ಕಥೆ, ಕಾವ್ಯ, ವಿಮರ್ಶೆ, ಅಂಕಣಬರಹ, ಅನುವಾದ, ಜಾನಪದ ಸಾಹಿತ್ಯ ಸಂಗ್ರಹ,ಮುಂತಾದ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡಿದವರು. ಸುಮಾರು 40ಕ್ಕೂ ಹೆಚ್ಚಿನ ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿದ ಸ. ರಘುನಾಥ ಅವರು ಸಮಾಜಸೇವೆಯಲ್ಲಿಯೂ ಹೆಚ್ಚಾಗಿ ತೊಡಗಿಸಿಕೊಂಡವರು. 1995 ರಿಂದ ’ನಮ್ಮ ಮಕ್ಕಳು’ ಎಂಬ ಸಂಸ್ಥೆಯ ಮೂಲಕ ಸಾಮಾಜಿಕ ಕಾರ್ಯ: ಭಿಕ್ಷುಕ, ಅನಾಥ, ವೃದ್ಧರಿಗೆ, ಅಂಗವಿಕಲರಿಗೆ ಶೈಕ್ಷಣಿಕ ಹಾಗು ಉಚಿತ ವೈದ್ಯಕೀಯ ನೆರವು. 1994 ರಿಂದ 2014 ರವರೆಗೆ ಗಾಯಗೊಂಡ ಪ್ರಾಣಿ  - ಪಕ್ಷಿಗಳ ಆರೈಕೆ. 2005ರಿಂದ ನಾಟಿ ಔಷಧ ತಯಾರಿಕೆ, ಉಚಿತ ...

READ MORE

Related Books