ಕಾಂಪೋಸ್ಟ್‌ - ಸುಸ್ಥಿರ ಕೃಷಿಗೆ ಸುಭದ್ರ ಅಡಿಪಾಯ

Author : ಎ.ಎಸ್. ಕುಮಾರಸ್ವಾಮಿ

Pages 29

₹ 20.00




Year of Publication: 2014
Published by: ಸಂವಹನ ಕೇಂದ್ರ
Address: ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ

Synopsys

ರಾಸಾಯನಿಕ ಗೊಬ್ಬರಗಳಿಗಿಂತ ಸಾವಯವ ಗೊಬ್ಬರ ಬಳಕೆ ಉತ್ತಮ, ಸುಸ್ಥಿರ ಕೃಷಿಗೆ ಸಹಕಾರಿ ಹೇಗೆ ಎಂಬುದನ್ನು ಲೇಖಕರು ವಿವರವಾಗಿ ತಿಳಿಸಿದ್ದಾರೆ.

ಈ ಕೃತಿಯಲ್ಲಿ ಮಣ್ಣಿನ ಸಾವಯವ ಇಂಗಾಲ, ಮಣ್ಣಿನ ಆರೋಗ್ಯ ಸೂಚಿ, ಕಾಂಪೋಸ್ಟ್‌ ಬಳಕೆಯಿಂದಾಗುವ ಲಾಭಗಳು, ಕಾಂಪೋಸ್ಟ್‌ ತಯಾರಿಕೆಯಲ್ಲಿ ಬಳಸಬಹುದಾದ ಕಚ್ಚಾ ವಸ್ತುಗಳು, ಕಾಂಪೋಸ್ಟ್‌ ತಯಾರಿಕೆಯಲ್ಲಿ ಇಂಗಾಲ ಮತ್ತು ಸಾರಜನಕ ಅನುಪಾತದ ಪಾತ್ರ, ಕಾಂಪೋಸ್ಟ್‌ ತಯಾರಿಕೆಯಲ್ಲಿ ಸೂಕ್ಷ್ಮಜೀವಿಗಳ ಪಾತ್ರ, ಕಾಂಪೋಸ್ಟ್‌ ತಯಾರಿಕೆಯ ವಿಧಾನಗಳು, ಉತ್ತಮ ಕಾಂಪೋಸ್ಟ್‌ ವಿಷಯಗಳ ವೈವಿಧ್ಯತೆ ಕೃತಿಯಲ್ಲಿದೆ. 

About the Author

ಎ.ಎಸ್. ಕುಮಾರಸ್ವಾಮಿ
(20 January 1953)

ಲೇಖಕ, ಕೃಷಿ ವಿಜ್ಞಾನಿ ಡಾ.ಎ.ಎಸ್. ಕುಮಾರಸ್ವಾಮಿ (ಅಬ್ಬಿಗೆರೆ ಶಿವಲಿಂಗಪ್ಪ ಕುಮಾರಸ್ವಾಮಿ) ಜನಿಸಿದ್ದು 1953 ಜನವರಿ 20 ರಂದು. ದಾವಣಗೆರೆ ಜಿಲ್ಲೆ ದೊಡ್ಡಬ್ಬೀಗೆರೆ ಗ್ರಾಮದವರು. ಸಂತೇಬೆನ್ನೂರಿನಲ್ಲಿ ಎಸ್‌ಎಸ್‌ಎಲ್‌ಸಿ ವರೆಗೂ ಶಿಕ್ಷಣ ಪಡೆದು, ಧಾರವಾಡ ಹಾಗೂ ಬೆಂಗಳೂರಿನಲ್ಲಿ ಕೃಷಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪಡೆದಿದ್ದಾರೆ. ಬೆಂಗಳೂರಿನ ಕೃಷಿ ಮಹಾವಿದ್ಯಾಲಯದಲ್ಲಿ ಶಿಕ್ಷಕರಾಗಿ ವೃತ್ತಿ ಆರಂಭಿಸಿ, ಪ್ರಾಧ್ಯಾಪಕರಾಗಿ, ವಲಯ ಕೃಷಿ ಸಂಶೋಧನ ಕೇಂದ್ರದಲ್ಲಿ ತಂಬಾಕು ಬೆಳೆ ಬೇಸಾಯ ಶಾಸ್ತ್ರಜ್ಞರಾಗಿ, ಹಾಸನ ಕೃಷಿ ಕಾಲೇಜು ಸ್ಥಾಪಕ ನಿರ್ದೇಶಕರು ಹಾಗೂ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಹ ಸಂಶೋಧನಾ ನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ. ತಮ್ಮ ಅನುಭವ, ...

READ MORE

Related Books