ಕಾಮ್ರೇಡ್ ಡಾಂಗೆಯವರ ಭಾಷಣಗಳು

Author : ಚಂದ್ರಕಾಂತ ಪೋಕಳೆ

Pages 112

₹ 99.00




Year of Publication: 2020
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರ ಪಾರ್ಕ್ (ಪೂರ್ವ), ಬೆಂಗಳೂರು-560001

Synopsys

ಲೇಖಕ ಚಂದ್ರಕಾಂತ ಪೋಕಳೆ ಅವರ ಅನುವಾದಿತ ಕೃತಿ-ಕಾಮ್ರೇಡ್ ಡಾಂಗೆಯುವರ ಭಾಷಣಗಳು. ಶ್ರೀಪಾದ ಅಮೃತ ಡಾಂಗೆ ಅವರು ಭಾರತೀಯ ಕಮ್ಯೂನಿಸ್ಟ್ ಪಕ್ಷದ ಪ್ರಮುಖ ನಾಯಕರು. ಸಾಮ್ಯವಾದಿ (1922) ಹಾಗೂ ಕ್ರಾಂತಿ (1927) ಪತ್ರಿಕೆಗಳನ್ನು ನಡೆಸಿದರು. ಶಾಸಕರಾಗಿ, ಸಂಸದರಾಗಿ, AITUC ಅಧ್ಯಕ್ಷರಾಗಿ, CPI ಅಧ್ಯಕ್ಷರಾಗಿದ್ದರು. ಭಾರತೀಯ ಟ್ರಡ್ ಯೂನಿಯನ್ ಚಳವಳಿಗಳಲ್ಲೂ ಸಕ್ರಿಯವಾಗಿ ಪಾಲ್ಗೊಂಡು ಕಾರ್ಮಿಕರ ನ್ಯಾಯಕ್ಕಾಗಿ ಹೋರಾಡಿದವರು. ಬ್ರಿಟಿಷ್ ಸರ್ಕಾರದ ವಿರುದ್ಧ ದೇಶದ ಸ್ವಾತಂತ್ಯ್ರಕ್ಕಾಗಿ ಹೋರಾಡುತ್ತಲೇ ಕಾರ್ಮಿಕರ ಹಕ್ಕುಗಳನ್ನು ಪ್ರತಿಪಾದಿಸಿದ ಆರೋಪ ಮೇಲೆ ಅವರನ್ನು ಒಟ್ಟು 13 ವರ್ಷ ಕಾಲ ಜೈಲಿನಲ್ಲಿ ಬಂಧಿಸಿದ್ದರು.

ಮುಂದೆ ಸಿಪಿಐ ಪಕ್ಷವು ಸಿಪಿಎಂ ಎಂದು ವಿಭಜನೆಯಾದ ನಂತರವೂ ಅವರು 1978ರವರೆಗೆ ಸಿಪಿಐ ಪಕ್ಷದ ಸೂತ್ರ ಹಿಡಿದಿದ್ದರು. ಭಾಷಾವಾರು ಪ್ರಾಂತ್ಯಗಳ ವಿಭಜನೆ ಸಮಯದಲ್ಲೂ ಡಾಂಗೆ ಅವರು ಮಹಾರಾಷ್ಟ್ರ ರಾಜ್ಯ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು.  ಡಾಂಗೆ ಅವರ ಭಾಷಣಗಳು ಕಾರ್ಮಿಕರ ಮೇಲೆ ತುಂಬಾ ಪ್ರಭಾವ ಬೀರುತ್ತಿದ್ದು, ದೇಶದಲ್ಲಿ ಕಮ್ಯೂನಿಸ್ಟ್ ಚಳವಳಿ ತೀವ್ರಗೊಂಡು ಜನಮನದಲ್ಲಿ ಪಕ್ಷದ ಧ್ಯೇಯ-ಧೋರಣೆಗಳು ನೆಲೆಗೊಳ್ಳುವಂತೆ ಮಾಡಿದ್ದನ್ನು ಮರೆಯುವಂತಿಲ್ಲ. ಅವರ ಏಳು ಭಾಷಣಗಳನ್ನು ಇಲ್ಲಿ ಭಾಷಾಂತರಿಸಲಾಗಿದೆ. 22 ಮೇ 1991 ರಂದು ಕಾಮ್ರೇಡ್ ಡಾಂಗೆ ಅವರು ನಿಧನರಾದರು. 

 

About the Author

ಚಂದ್ರಕಾಂತ ಪೋಕಳೆ
(20 August 1949)

ಲೇಖಕರು, ಪ್ರಖ್ಯಾತ ಅನುವಾದಕರೂ ಆದ ಚಂದ್ರಕಾಂತ ಪೊಕಳೆ ಅವರು 20-08-1949 ರಂದು ಜನಿಸಿದರು. ಹುಟ್ಟೂರು  ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ. ತಂದೆ- ಮಹಾಬಲೇಶ್ವರ, ತಾಯಿ- ಪಾರ್ವತಿ. ಹೈಸ್ಕೂಲುವರೆಗೆ ಮಂಚಿಕೇರಿಯಲ್ಲಿ ಓದಿದ ಅವರು, ಧಾರವಾಡದ ಕಾಲೇಜಿನಿಂದ ಬಿ.ಎ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಗಳಿಸಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಗೌರೀಶ ಕಾಯ್ಕಿಣಿ, ಶಂಬಾ, ಬೇಂದ್ರೆ, ಇವರುಗಳ ಸಾಹಿತ್ಯದಿಂದ ಪ್ರೇರಿತರಾದ ಪೊಕಳೆ, ಅಧ್ಯಾಪಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇಡಕಿಹಾಳದ ಲಠ್ಠೆ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ಅವರು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ...

READ MORE

Related Books