ದಲಿತ ಚಳವಳಿ ಚರಿತ್ರೆ ಸಂಪುಟ-4

Author : ವಿ. ಮುನಿವೆಂಕಟಪ್ಪ

Pages 580

₹ 580.00




Year of Publication: 2013
Published by: ಎಸ್.ಎಂ. ಎಸ್. ಪಬ್ಲಿಕೇಷನ್ಸ್
Address: # 61, 6ನೇ ಅಡ್ಡರಸ್ತೆ, ಹೆಬ್ಬಾಳ ಮುಖ್ಯರಸ್ತೆ, ಕಾವೇರಿ ಗ್ರಾಮೀಣ ಬ್ಯಾಂಕ್ ಸಮೀಪ, ಮಂಚೇಗೌಡನ ಕೊಪ್ಪಲು, ಮೈಸೂರು-570017

Synopsys

ಲೇಖಕ ಹಾಗೂ ಚಿಂತಕ ಡಾ. ವಿ. ಮುನಿವೆಂಕಟಪ್ಪ ಅವರು ಸಂಪಾದಿತ ಕೃತಿ-ದಲಿತ ಚಳವಳಿ ಚರಿತ್ರೆ ಸಂಪುಟ-4. ಲೇಖಕರು ಸ್ವತಃ ದಲಿತ ಚಳವಳಿಯಲ್ಲಿ ಪಾಲ್ಗೊಂಡಿದ್ದು, ಅದರ ಹೋರಾಟದ ಸ್ವರೂಪವನ್ನು ಚೆನ್ನಾಗಿ ಬಲ್ಲವರು. ಸಾಮಾಜಿಕ ಒತ್ತಡದಿಂದ ದಲಿತ ಚಳವಳಿ ಹೇಗೆ ಹುಟ್ಟಿಕೊಂಡಿತು ಮತ್ತು ಸುಮಾರು 10 ವರ್ಷ ಕಾಲ ತನ್ನ ಉದ್ದೇಶಕ್ಕೆ ಬದ್ಧವಾಗಿತ್ತು. ತದನಂತರ ಅದು ಸ್ವಾರ್ಥಿಗಳ ಕಪಿಮುಷ್ಠಿಯಲ್ಲಿ ಸಿಕ್ಕು ಹೇಗೆ ಹಾಳಾಗುತ್ತಾ ಬಂತು. ಈ ಬಗ್ಗೆ ಲೇಖಕರಿಗೆ ಸ್ಪಷ್ಟತೆ ಇದೆ. ರಾಜ್ಯದ ನಾನಾ ಕಡೆಯಿಂದ ಲೇಖನಗಳನ್ನು ತರಿಸಿಕೊಂಡು ಸಂಗ್ರಹಿಸಿದ್ದೇ ಈ ಕೃತಿ. ಡಾ. ಕೆ. ಸದಾಶಿವ ಅವರು ಕೃತಿಗೆ ಮುನ್ನುಡಿ ಬರೆದಿದ್ದು, ದಲಿತ ಚಳವಳಿಯ ಚರಿತ್ರೆ ದಾಖಲಿಸುವ ಪ್ರಯತ್ನ ಶ್ಲಾಘನೀಯ ಎಂದು ಪ್ರಶಂಸಿಸಿದ್ದಾರೆ.

About the Author

ವಿ. ಮುನಿವೆಂಕಟಪ್ಪ

ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...

READ MORE

Related Books