ದಾಂಪತ್ಯ ವಿರಸ: ಸಂಧಾನವೇ? ವಿಚ್ಛೇದನೆಯೇ?

Author : ಸಿ.ಆರ್. ಚಂದ್ರಶೇಖರ್

Pages 104

₹ 59.00




Year of Publication: 2017
Published by: ಸಪ್ನ ಬುಕ್ ಹೌಸ್
Address: # 11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-09

Synopsys

ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ ಅವರ ಕೃತಿ-ಇಂದಿನ ಸಮಾಜದ ಪಿಡುಗು, ದಾಂಪತ್ಯ ವಿರಸ; ಸಂಧಾನವೇ? ವಿಚ್ಛೇದನೆಯೇ?. ಮದುವೆಯಾಗಿ ಬಹುವರ್ಷಗಳ ಕಾಲ ಕೂಡಿ ಸಂಸಾರ ನಡೆಸುವ ದಂಪತಿಗಳು ಕಡಿಮೆಯಾಗುತ್ತಿದ್ದಾರೆ. ಮದುವೆಯಾಗಿ ಒಂದೆರಡು ವರ್ಷದಲ್ಲೇ ವಿಚ್ಛೇದನೆ ನೀಡುವ ಪ್ರವೃತ್ತಿ ಹೆಚ್ಚುತ್ತಿದೆ. ದಾಂಪತ್ಯ ವಿರಸವು ಸಂಧಾನದಿಂದ ಬಗೆಹರಿಸಿಕೊಳ್ಳಬೇಕು. ಅದು ವಿಚ್ಛೇದನೆಗೆ ಕಾರಣವಾದರೆ ಸಂಸಾರದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಸಣ್ಣ ಸಣ್ಣ ಮಕ್ಕಳಿದ್ದರಂತೂ ಪರಿಣಾಮಕತೆಯ ಭೀಕರತೆ ಹೆಚ್ಚಿರುತ್ತದೆ. ಆದ್ದರಿಂದ, ಸಂಸಾರದಲ್ಲಿ ವಿರಸ ಹೆಚ್ಚುತ್ತಿದ್ದು, ಅದಕ್ಕೆ ಕಾರಣಗಳು, ಪರಿಹಾರಗಳು ಮನಸ್ಥಿತಿಗಳನ್ನು ಹೇಗೆ ನಿಭಾಯಿಸಿಕೊಳ್ಳಬೇಕು ಎಂಬಿತ್ಯಾದಿ ಅಂಶಗಳ ಬಗ್ಗೆ ಮನೋವೈದ್ಯರಾದ ಲೇಖಕರು ಕೆಲವು ಸಲಹೆಗಳನ್ನು ನೀಡಿದ್ದು ಈ ಕೃತಿಯ ವೈಶಿಷ್ಟ್ಯ.

About the Author

ಸಿ.ಆರ್. ಚಂದ್ರಶೇಖರ್
(12 December 1948)

ಡಾ. ಸಿ.ಆರ್. ಚಂದ್ರಶೇಖರ್  ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ,  ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು  ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...

READ MORE

Related Books