ದತ್ತ ಪ್ರತಿಭೆ

Author : ಜಿ.ಎಸ್. ಶಿವರುದ್ರಪ್ಪ

Pages 40

₹ 10.00




Year of Publication: 1999
Published by: ಪ್ರಸಾರಾಂಗ
Address: ಪ್ರಸಾರಾಂಗಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ

Synopsys

ಕರ್ನಾಟಕ ವಿಶ್ವವಿದ್ಯಾಲಯವು ಬೇಂದ್ರೆಯವರ ಜನ್ಮದಿನವನ್ನು ಕವಿದಿನವನ್ನಾಗಿ ಆಚರಿಸುತ್ತದೆ. ಕವಿದಿನದಂದು ಬೇಂದ್ರೆಯವರನ್ನು ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗುತ್ತದೆ. ಕವಿ ಜಿ.ಎಸ್. ಶಿವರುದ್ರಪ್ಪ ಅವರು ೧೯೯೯ರ ಕವಿದಿನದಂದು ಮಾಡಿದ ಉಪನ್ಯಾಸವನ್ನು ’ದೇಸೀಯತೆಯಲ್ಲಿ ಬೇರೂರಿ ಅರಳಿದ ದತ್ತ ಪ್ರತಿಭೆ’ ಶೀರ್ಷಿಕೆಯಲ್ಲಿ ಪ್ರಕಟಿಸಲಾಗಿದೆ. ಶಿವರುದ್ರಪ್ಪನವರು ಕವಿ ಬೇಂದ್ರೆಯವರ ದೇಸೀ ನಿಷ್ಠತೆಯ ಹಲವು ಆಯಾಮಗಳನ್ನು ಪರಿಶೀಲಿಸಿದ್ದಾರೆ.

 

About the Author

ಜಿ.ಎಸ್. ಶಿವರುದ್ರಪ್ಪ
(07 February 1926 - 23 December 2013)

ಸಮನ್ವಯ ಕವಿಗಳಲ್ಲಿ ಒಬ್ಬರು ಎಂದು ಗುರುತಿಸಲಾಗುವ ಡಾ.ಜಿ.ಎಸ್. ಶಿವರುದ್ರಪ್ಪ ಅವರು ವಿಮರ್ಶಕರಾಗಿಯೂ ಗಣನೀಯ ಸಾಧನೆ ಮಾಡಿದ್ದಾರೆ. ಗದ್ಯ-ಪದ್ಯಗಳೆರಡರಲ್ಲಿಯೂ ಮಾಗಿದ ಪ್ರತಿಭೆ ಅವರದು. ತಂದೆ ಗುಗ್ಗುರಿ ಶಾಂತವೀರಪ್ಪ ಮತ್ತು ತಾಯಿ ವೀರಮ್ಮ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ 1926ರ ಫೆಬ್ರುವರಿ 7ರಂದು ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್ ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದ ಕಾರಣದಿಂದ ಸರಕಾರಿ ನೌಕರಿ ಹಿಡಿಯಬೇಕಾಯಿತು. ಗುಬ್ಬಿ ತಾಲ್ಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಸೇರಿದರು. ಆದರೆ ಓದಲೇಬೇಕೆಂಬ ಅದಮ್ಯ ಆಸೆಯಿಂದ ಕೆಲಸಕ್ಕೆ ವಿದಾಯ ಹೇಳಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದನ್ನು ಮುಂದುವರೆಸಿ ಬಿ.ಎ. ಪದವಿ (1949), ಸ್ವರ್ಣಪದಕದೊಂದಿಗೆ ...

READ MORE

Related Books