ದಟ್ಟಾರಣ್ಯದೊಳಗೆ ಬಾಡಿಗೆ ಬಂಟರು

Author : ಹಾಡ್ಲಹಳ್ಳಿ ನಾಗರಾಜ್

Pages 84

₹ 8.00




Year of Publication: 1985
Published by: ಭವಾನಿ ಪ್ರಕಾಶನ
Address: ಅತ್ತಿಹಳ್ಳಿ, ಶಂಕ ಅಂಚೆ, ಹಾಸನ ತಾಲ್ಲೂಕು, ಹಾಸನ ಜಿಲ್ಲೆ.
Phone: 9964180600

Synopsys

‘ದಟ್ಟಾರಣ್ಯದೊಳಗೆ ಬಾಡಿಗೆ ಬಂಟರು’ ಹಿರಿಯ ಲೇಖಕ ಹಾಡ್ಲಹಳ್ಳಿ ನಾಗರಾಜು ಅವರ ಕಾದಂಬರಿ. ಇದು ಮಲೆನಾಡಿನ ಹಳ್ಳಿಯೊಂದರ ಒಣ ರಾಜಕೀಯದ ಪರಿಣಾಮವಾಗಿ ಬದುಕು ದುರಂತವಾಗುವ ವಸ್ತುನ್ನು ಒಳಗೊಂಡಿದ್ದು, ಮಲೆನಾಡಿನ ಚಿತ್ರವನ್ನು ಕಟ್ಟಿಕೊಡುತ್ತದೆ.

About the Author

ಹಾಡ್ಲಹಳ್ಳಿ ನಾಗರಾಜ್

ಹಾಡ್ಲಹಳ್ಳಿ ನಾಗರಾಜು ಅವರು ಮೂಲತಃ ಹಾಸನಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹಾಡ್ಲಹಳ್ಳಿ ಗ್ರಾಮದವರು. ತಂದೆ- ಗುರುಶಾಂತೇಗೌಡರು, ತಾಯಿ- ಪುಟ್ಟಮ್ಮ. ಕಡುಬಡತನದ ರೈತಾಪಿ ಕುಟುಂಬದಲ್ಲಿ ಜನಿಸಿದ ಅವರು ಬಿ.ಎಸ್ಸಿ ಪದವೀಧರರಾಗಿದ್ದು, ಎನ್.ಸಿ.ಸಿ ಇಲಾಖೆಯಲ್ಲಿ 36 ವರ್ಷಗಳ ಕಾಲ ಸೇವೆಸಲ್ಲಿಸಿದ್ದಾರೆ. ಅಲ್ಲದೇ ಅವರ ಕಾರ್ಯವೈಖರಿಯಿಂದಾಗಿ ಮುಖ್ಯಮಂತ್ರಿಗಳ ಶ್ಲಾಘನಾಪತ್ರಕ್ಕೆ ಪಾತ್ರರಾಗಿದ್ದಾರೆ. ಎನ್.ಸಿ.ಸಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಂತರ ಅದೇ ಇಲಾಖೆಯಲ್ಲಿ ಗೆಜೆಟೆಡ್ ಅಧಿಕಾರಿಯಾಗಿ ಸೇವೆಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. ಪ್ರಸ್ತುತ ಹಾಸನ ನಗರ ಸಮೀಪ ಅತ್ತಿಹಳ್ಳಿ ಎಂಬ ಗ್ರಾಮದಲ್ಲಿ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ಅಪ್ಪಟ ಮಲೆನಾಡಿನ ಪರಿಸರದಲ್ಲಿ ಹುಟ್ಟಿಬೆಳೆದ ನಾಗರಾಜು ಅವರು ಕನ್ನಡ ಸಾಹಿತ್ಯಲೋಕದಲ್ಲಿ ತಮ್ಮದೇ ಛಾಪುಮೂಡಿಸಿದ್ದಾರೆ. ...

READ MORE

Related Books