ದೇವಪುರ ಕುಡುಮ

Author : ವಸಂತಕುಮಾರ ಪೆರ್ಲ

Pages 148

₹ 150.00




Year of Publication: 2019
Published by: ಸುವರ್ಣ ಮಹೋತ್ಸವ ಆಚರಣಾ ಸಮಿತಿ
Address: ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವ ಪುಸ್ತಕ ಮಾಲಿಕೆ, ಶ್ರೀಕ್ಷೇತ್ರ ಧರ್ಮಸ್ಥಳ

Synopsys

ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವ ಪುಸ್ತಕ ಮಾಲಿಕೆಯಡಿ ಸುವರ್ಣ ಸಂಚಯದ 13ನೇ ಭಾಗವಾಗಿ ಈ ಕೃತಿ ಪ್ರಕಟಗೊಂಡಿದ್ದು, ಲೇಖಕ ಡಾ. ವಸಂತಕುಮಾರ ಪೆರ್ಲ ಅವರು ರಚಿಸಿದ್ದಾರೆ. ಧರ್ಮಸ್ಥಳದ ಒಳಾಡಳಿತ (ಪದ್ಧತಿ-ಪರಂಪರೆ--ವಿಕಾಸಗೊಂಡ ಕಥನ), ಆಬಿವೃದ್ಧಿಯ ಶೆಕೆ (ವ್ಯವಸ್ಥೆಯಲ್ಲಿ ಆಧುನಿಕತೆಯ ಸ್ಪರ್ಶ), ಮಾದರಿ ಆಗಬೇಕೆಂಬುದೇ ನಮ್ಮ ಕನಸು (ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ ಒಂದು ಸಂರ್ದಶನ) ಹೀಗೆ ವಿವಿಧ ಅಧ್ಯಾಯಗಳಡಿ ಹತ್ತು ಹಲವು ವಿಷಯಗಳು ಒಳಗೊಂಡವೆ.

ಕೃತಿಗೆ ಮುನ್ನುಡಿ ಬರೆದ ಸಾಹಿತಿ ವೇದಮೂರ್ತಿ ಶ್ರೀ ಕೆ. ಲಕ್ಷ್ಮಿನಾರಾಯಣ ಅಸ್ರಣ್ಣ ‘ಧಾರ್ಮಿಕ ಕ್ಷೇತ್ರ ಕೇವಲ ಆಕರ್ಷಣೆಯ ಕೇಂದ್ರವಾಗಿರದೇ ಜನಜೀವನ ಸಮಗ್ರತೆಗೆ ಪೋಷಣೆಯನ್ನು ನೀಡಬೇಕಾಗುತ್ತದೆ. ಧಾರ್ಮಿಕತೆಯೊಂದಿಗೆ ಸಾಂಸ್ಕೃತಿಕ, ಸಾಮಾಜಿಕ, ಸಾಹಿತ್ಯಿಕ, ಶೈಕ್ಷಣಿಕ, ಆರೋಗ್ಯ ಹೀಗೆ ಬಹುಮುಖಿ ನೆಲೆಯಲ್ಲಿ ತೆರೆದುಕೊಳ್ಳಬೇಕಾಗುತ್ತದೆ. ಭಕ್ತಿ-ಭಾವ-ಹೃದಯಗಳ ಸಂಗಮ ಕ್ಷೇತ್ರವಾಗಿಯೂ ಇರಬೇಕಾಗುತ್ತದೆ. ಶ್ರೀಕ್ಷೇತ್ರ ಧರ್ಮಶ್ಥಳದಲ್ಲಿ ಅವೆಲ್ಲವೂ ಮೇಳೈಸಿಕೊಂಡಿರುವುದನ್ನು ನಾವು ಗಮನಿಸಬಹುದು. ಶ್ರೀ ಕ್ಷೇತ್ರ ಬೆಳೆದು ಬೆಳಗಬೇಕಿದ್ದರೆ ಇಲ್ಲಿನ ಆಡಳಿತ ವ್ಯವಸ್ಥೆಗಳು, ಧಾರ್ಮಿಕ ಕಟ್ಟುಕಟ್ಟಳೆಗಳು ಅನುಚಾನವಾಗಿ ನಡೆದುಕೊಂಡು ಬರುತ್ತಿರುವುದೇ ಆಗಿದೆ. ಅದಕ್ಕೆಲ್ಲ ಅಲ್ಲಲ್ಲಿಗೆ ಸಲ್ಲುವ ಜವಾಬ್ದಾರಿ ಸ್ಥಾನಗಳನ್ನು ಅದನ್ನು ನಿರ್ವಹಿಸಬಲ್ಲ ವ್ಯಕ್ತಿಗಳು ಒಟ್ಟು ವ್ಯವಸ್ಥೆಯ ಭಾಗವಾಗಿ ಶ್ರೀಕ್ಷೇತ್ರದ ಒಳ-ಹೊರಗಿನ ಸೌಂದರ್ಯಕ್ಕೆ ಕಾರಣವಾಗಿರುವುದು ಈ ಕೃತಿಯಲ್ಲಿ ವಿಶದೀಕರಿಸಲ್ಪಟ್ಟಿದೆ’ ಎಂದು ಪ್ರಶಂಸಿಸಿದ್ದಾರೆ. .

About the Author

ವಸಂತಕುಮಾರ ಪೆರ್ಲ
(02 July 1958)

ಯಕ್ಷಗಾನ, ಸಾಹಿತ್ಯ, ಶಿಕ್ಷಣ, ಧಾರ್ಮಿಕ, ವೈದಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಹೆಸರುಗಳಿಸಿರುವ ಲೇಖಕ ವಸಂತಕುಮಾರ ಪೆರ್ಲ. ಅವರು ಕಾಸರಗೋಡಿನ ಪುಟ್ಟ ಊರಾದ ಪೆರ್ಲದಲ್ಲಿ 1958ರ ಜುಲೈ 2ರಂದು ಜನಿಸಿದರು. ಈ ಪೆರ್ಲ ಭರಿನ ಹೆಸರಿಗೆ ಕೀರ್ತಿ ತಂದವರಲ್ಲಿ ವಸಂತಕುಮಾರ್ ಒಬ್ಬರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪಳತ್ಕ್ತಡ್ಕ ಶಾಲೆಯಲ್ಲಿ ಮತ್ತು ಪ್ರೌಢಶಿಕ್ಷಣವನ್ನು ಪೆರ್ಲ ಸತ್ಯನಾರಾಯಣ ಹೈಸ್ಕೂಲಿನಲ್ಲಿ ಪೂರೈಸಿದರು. ಪದವಿ, ಉನ್ನತ ಪದವಿಯನ್ನು ಮತ್ತು ರಂಗಭೂಮಿ ವಿಷಯದಲ್ಲಿ ಡಾಕ್ಟರೇಟ್. ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದಾರೆೆ.  ಹೈಸ್ಕೂಲ್ ವಿದ್ಯಾಭ್ಯಾಸದ ಕಾಲದಲ್ಲೇ ಕಥೆಗಳನ್ನು ಬರೆಯ ತೊಡಗಿದ ಅವರು ಬೆಂಗಳೂರಿನ ಪ್ರಜಾಪ್ರಭುತ್ವ ವಾರಪತ್ರಿಕೆಯಲ್ಲಿ ಉಪಸಂಪಾದಕ-ವರದಿಗಾರರಾಗಿ ಔದ್ಯೋಗಿಕ ...

READ MORE

Related Books