ದೇವರ ದಾಸಿಮಯ್ಯ

Author : ಸುರೇಂದ್ರಕುಮಾರ ಕೆರಮಗಿ

Pages 61

₹ 40.00




Year of Publication: 2019
Published by: ಪ್ರಸಾರಾಂಗ
Address: ಶರಣಬಸವ ವಿಶ್ವವಿದ್ಯಾಲಯ, ಕಲಬುರಗಿ

Synopsys

ಲೇಖಕ ಡಾ. ಸುರೇಂದ್ರಕುಮಾರ್ ಕೆರಮಗಿ ಅವರ ಕೃತಿ ‘ದೇವರದಾಸಿಮಯ್ಯ. ಈ ಶರಣನ ಜೀವನ ವೃತ್ತಾಂತ ಹಾಗೂ ವಚನಗಳ ವಿಶ್ಲೇಷಣೆ ಒಳಗೊಂಡ ಕೃತಿ ಇದು. ದೇವರ ದಾಸಿಮಯ್ಯ ಹಾಗೂ ಜೇಡರ ದಾಸಿಮಯ್ಯ ಇಬ್ಬರೂ ಒಂದೇ ಎಂದು ಖ್ಯಾತ ಸಂಶೋಧಕ ಡಾ. ಎಂ ಎಂ ಕಲಬುರ್ಗಿ ಅವರು ‘ಶಾಸನಗಳಲ್ಲಿ ಶಿವಶರಣರು’ ಕೃತಿಯಲ್ಲಿ ಸಮರ್ಥಿಸಿಕೊಂಡಿದ್ದಾರೆ. ಈಗಿನ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರು ನಿವಾಸಿ ದಾಸಿಮಯ್ಯನವರು ಆದ್ಯ ವಚನಕಾರ ಜೊತೆ ತರ್ಕ ವೈಜ್ಞಾನಿಕ ಆಲೋಚನೆ ಹಾಗೂ ಸಾಮಾಜಿಕ ವಿಡಂಬನೆಯಿಂದ ಸಮಾಜವನ್ನು ತಿದ್ದಿದ್ದಾರೆ. ಇಂತಹ ನಿಷ್ಠುರ ವಚನಕಾರರ ಕುರಿತ ಕಿರುಹೊತ್ತಿಗೆ ಇದು.

About the Author

ಸುರೇಂದ್ರಕುಮಾರ ಕೆರಮಗಿ

ಡಾ. ಸುರೇಂದ್ರಕುಮಾರ್ ಕೆರಮಗಿ ಅವರು ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನವರು. ಸ್ವಾಯತ್ತ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಸಹ ಪ್ರಾಧ್ಯಾಪಕರು. "ಡಾ.ಹಾ.ಮಾ ನಾಯಕ ಅವರ ಅಂಕಣ ಸಾಹಿತ್ಯ ಒಂದು ಅಧ್ಯಯನ" ವಿಷಯವಾಗಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯವು ಇವರಿಗೆ ಪಿಎಚ್ ಡಿ ಪ್ರದಾನ ಮಾಡಿದೆ. ಹಳೆಗನ್ನಡ ಸಾಹಿತ್ಯದಲ್ಲೂ ಇವರಿಗೆ ಆಸಕ್ತಿ. ರಾಷ್ಟ್ರೀಯ,ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ. ಕೃತಿಗಳು: ಆಯ್ದ ವೈಚಾರಿಕ ಪ್ರಬಂಧಗಳ ಸಂಗ್ರಹ, ಹಾ.ಮಾ ನಾಯಕ,ಕನ್ನಡದಲ್ಲಿ ಅಂಕಣ ಸಾಹಿತ್ಯ, ಸೃಷ್ಟಿ ಸೌರಭ, ಮಾತು ಮಥಿ ಸಿದಾಗ, ಸಾಹಿತ್ಯ ಸುಧೆ, ಸಾಹಿತ್ಯ ಸಂಜೀವಿನಿ, ಹೈದರಾಬಾದ ಕರ್ನಾಟಕದ ಪ್ರಮುಖ ಕಾದಂಬರಿಕಾರರು, ಮಡಿವಾಳ ...

READ MORE

Related Books