ದೇವರು: ಧಾರ್ಮಿಕತೆಯಲ್ಲಿ ಶ್ರದ್ಧೆ-ಓಶೋ

Author : ಟಿ.ಎನ್. ವಾಸುದೇವ ಮೂರ್ತಿ

Pages 270

₹ 250.00




Year of Publication: 2014
Address: ಬೆಂಗಳೂರು

Synopsys

‘ದೇವರು: ಧಾರ್ಮಿಕತೆಯಲ್ಲಿ ಶ್ರದ್ಧೆ-ಓಶೋ’ ಆಧ್ಯಾತ್ಮಿಕ ಚಿಂತಕ ಎಂದೇ ಗುರುತಿಸಿಕೊಳ್ಳುವ ಓಶೋ ರಜನೀಶ ಅವರ ಕೃತಿಯನ್ನು ಟಿ.ಎನ್. ವಾಸುದೇವಮೂರ್ತಿ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಆಧ್ಯಾತ್ಮಿಕ ಚಿಂತಕರೆಂದೇ ಗುರುತಿಸಿಕೊಂಡ ಓಶೋ ಭಕ್ತಿಗೆ ತಮ್ಮದೇ ಆದ ಹೊಸ ಭಾಷ್ಯ ಬರೆದವರು. ದೇವರು, ಧಾರ್ಮಿಕತೆಯ ಕುರಿತ ಓಶೋ ಚಿಂತನೆಗಳನ್ನು ಈ ಕೃತಿಯಲ್ಲಿ ಕಾಣಬಹುದಾಗಿದೆ.

About the Author

ಟಿ.ಎನ್. ವಾಸುದೇವ ಮೂರ್ತಿ
(30 December 1974)

ಟಿ.ಎನ್.ವಾಸುದೇವ ಮೂರ್ತಿ ಅವರು ಕಿ.ರಂ.ನಾಗರಾಜ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಅಲ್ಲಮ ಪ್ರಭುವಿನ ವಚನಗಳ ದಾರ್ಶನಿಕ ಮರುಚಿಂತನೆಯ ವಿಭಿನ್ನ ಸ್ವರೂಪಗಳು ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನದ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪ್ರಶಸ್ತಿ ಸಂದಿದೆ. ಬೆಂಗಳೂರು ವಿವಿಯಲ್ಲಿ ಕನ್ನಡ ಎಂ.ಎ (ತೌಲನಿಕ ಸಾಹಿತ್ಯ) ಪದವಿಯನ್ನು ಪಡೆದ ಮೇಲೆ ಬೆಂಗಳೂರಿನ ಹಲವು ಪ್ರಮುಖ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದರು. ನ್ಯಾಷನಲ್  ಕಾಲೇಜು, ಜೈನ್ ವಿಶ್ವವಿದ್ಯಾಲಯ ಕಾವ್ಯಮಂಡಲ ಮೊದಲಾದ ಕನ್ನಡ ಸ್ನಾತಕೋತ್ತರ ಕೇಂದ್ರಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಎಂ.ಎ. ಹಾಗೂ ಎಂ.ಫಿಲ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಓಶೋ ನೇರ ಶಿಷ್ಯರಾದ ಸ್ವಾಮಿ ಆನಂದ್ ಪ್ರಭಾವದಿಂದ ದೀಕ್ಷೆ ...

READ MORE

Related Books